ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿಕೆ
ಚಾಮರಾಜನಗರ: ಒಪಿಎಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನ ಬಜೆಟ್ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಬೇಸರ ಮೂಡಿಸಿದೆ ಎಂದರು.
ಮುಷ್ಕರ ಸಂದರ್ಭದಲ್ಲಿ ನೌಕರರೆಲ್ಲರೂ ಮನೆಯಲ್ಲೇ ಇದ್ದುಕೊಂಡು ಡಿಪಿ ಹಾಗೂ ಸ್ಟೇಟಸ್ನಲ್ಲಿ ಬಿತ್ತಿಪತ್ರಗಳನ್ನು ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದು. 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ವಿಧಾನಸಭಾ ಚುನಾವಣೆ ನೀತಿಸಂಹಿತೆ ಜಾರಿಗೂ ಮೊದಲು ಫಿಟ್ಮೆಂಟ್ ಸೌಲಭ್ಯ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪಂಜಾಬ್, ರಾಜಾಸ್ತಾನ, ಹಿವಾಚಲಪ್ರದೇಶಗಳ ಮಾದರಿಯಲ್ಲಿ ಎನ್ಪಿಎಸ್ ರದ್ದುಪಡಿಸಿ ಒಪಿಎಸ್ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು. ಈ ಮೂಲಕ ನೌಕರರ ಸಂಧ್ಯಾಕಾಲದ ಬದುಕಿಗೆ ಆಸರೆಯಾಗಬೇಕೆಂದು ಮನವಿ ಮಾಡಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಉಪಾಧ್ಯಕ್ಷ ಶಿವಮೂರ್ತಿ, ಯೋಗೇಶ್, ಖಜಾಂಚಿ ಮಹದೇವಯ್ಯ, ಕೃಷ್ಣಮೂರ್ತಿ, ರಾಜ್ಯ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಕುಂಟೋಜಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…