ಜಿಲ್ಲೆಗಳು

ಮಾರ್ಚ್‌ 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟ ಮುಷ್ಕರ

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿಕೆ

ಚಾಮರಾಜನಗರ: ಒಪಿಎಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 1  ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಬೇಸರ ಮೂಡಿಸಿದೆ ಎಂದರು.
ಮುಷ್ಕರ ಸಂದರ್ಭದಲ್ಲಿ ನೌಕರರೆಲ್ಲರೂ ಮನೆಯಲ್ಲೇ ಇದ್ದುಕೊಂಡು ಡಿಪಿ ಹಾಗೂ ಸ್ಟೇಟಸ್‌ನಲ್ಲಿ ಬಿತ್ತಿಪತ್ರಗಳನ್ನು ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದು. 6ನೇ ವೇತನ ಆಯೋಗದ ಮಾದರಿಯಂತೆ  7ನೇ ವೇತನ ಆಯೋಗದಿಂದ  ಶೀಘ್ರ ಮಧ್ಯಂತರ ವರದಿ ಪಡೆದು ವಿಧಾನಸಭಾ ಚುನಾವಣೆ ನೀತಿಸಂಹಿತೆ ಜಾರಿಗೂ ಮೊದಲು ಫಿಟ್‌ಮೆಂಟ್ ಸೌಲಭ್ಯ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪಂಜಾಬ್, ರಾಜಾಸ್ತಾನ, ಹಿವಾಚಲಪ್ರದೇಶಗಳ ಮಾದರಿಯಲ್ಲಿ ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು. ಈ ಮೂಲಕ ನೌಕರರ ಸಂಧ್ಯಾಕಾಲದ ಬದುಕಿಗೆ ಆಸರೆಯಾಗಬೇಕೆಂದು ಮನವಿ ಮಾಡಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಉಪಾಧ್ಯಕ್ಷ ಶಿವಮೂರ್ತಿ, ಯೋಗೇಶ್, ಖಜಾಂಚಿ ಮಹದೇವಯ್ಯ, ಕೃಷ್ಣಮೂರ್ತಿ, ರಾಜ್ಯ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಕುಂಟೋಜಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago