ಜಿಲ್ಲೆಗಳು

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒಗ್ಗಟ್ಟಾಗಿ ದುಡಿಯೋಣ : ಉಸ್ತುವಾರಿ ಸಚಿವ ವಿ‌.ಸೋಮಣ್ಣ

ಚಾಮರಾಜನಗರ: ಸರ್ವರನ್ನೂ ಒಳಗೊಂಡಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ರಾಜ್ಯ ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ‌.ಸೋಮಣ್ಣ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ೭೫ ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಚಾ.ನಗರ ಸಹಾ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಜಿಲ್ಲಾಡಳಿತ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಸನ್ಮಾನಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ರಾಜ್ಯದ ಗಡಿಜಿಲ್ಲೆಗಳಲ್ಲಿ ಒಂದಾದ ಚಾ.ನಗರ ಪ್ರತ್ಯೇಕ ಜಿಲ್ಲೆಯಾಗಿ ೨೫ ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ
ಜಿಲ್ಲೆಯ ಸಮಗ್ರವಾದ ಅಭಿವೃದ್ಧಿ ಅಭಿವೃದ್ಧಿ ಪಥದತ್ತಾ ಕೊಂಡೊಯ್ಯಲು ಸರ್ಕಾರ ತೀರ್ಮಾನಿಸಿದೆ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಗೋಶಾಲೆ, ಘನತ್ಯಾಜ್ಯ ನಿರ್ವಹಣಾ ಘಟಕ, ಪೌರಕಾರ್ಮಿಕರ ಗೃಹ ನಿರ್ಮಾಣ, ಪಶುಸಂಗೋಪನಾ ಕಾಲೇಜು, ನಗರೋತ್ಥಾನ ೩ನೇ ಹಂತದ ಯೋಜನೆಯಡಿ ೬೧ ಕೋಟಿ ಮೊತ್ತದ ೭೨ ಕಾಮಗಾರಿ ಅನುಮೋದನೆ, ವಿವಿಧ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ೧೧೧ ಕೋಟಿ ಅನುಮೋದನೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ವಿದ್ಯಾರ್ಥಿಗಳಿಗೆ ೫ ಕೋಟಿ ರೂ ಪ್ರೋತ್ಸಾಹ ಧನ, ಕೊಳ್ಳೇಗಾಲದಲ್ಲಿ ೮ ಕೋಟಿ ವೆಚ್ಚದ ತಾಯಿ ಮಗು ಆಸ್ಪತ್ರೆ ನಿರ್ಮಾಣ. ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳಿಂದ ೭೦ ಸಾವಿರ ಉದ್ಯೋಗ ಸೃಷ್ಟಿ, ಜಲಶಕ್ತಿ ಯೋಜನೆಯಡಿ ೨೬೦ ಕೆರೆಗಳ ಅಭಿವೃದ್ಧಿ, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ೧.೯೫ ಲಕ್ಷ ಶೌಚಾಲಯ ನಿರ್ಮಾಣ, ಜಲಜೀವನ್ ಮಿಷನ್ ಯೋಜನೆಯಡಿ ೧.೧೮ ಲಕ್ಷ ಮನೆಗಳ ನಿರ್ಮಾಣ, ಹಾಗೂ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ೧೧೬ ಕೋಟಿ ಮಂಜೂರಾಗಿದ್ದು ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ ಎಂದರು.

ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಜಿಲ್ಲೆಯ ೩೧ ಗ್ರಾ.ಪಂ ಆಯ್ಕೆಗೊಂಡಿದ್ದು ಸಮಗ್ರ ಅಭಿವೃದ್ಧಿಪಡಿಸಲಾಗುವುದು, ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವರನಟ ಡಾ.ರಾಜ್ ಕುಮಾರ್ ರಂಗಮಂದಿರ ಈ ಸಂದರ್ಭದಲ್ಲಿ ಉದ್ಘಾಟನೆಗೊಳ್ಳಲಿದೆ. ಇಂತಹ ಜನಪರ ಯೋಜನೆ ಹಾಗೂ ಸಾಧನೆಗಳನ್ನು ಸ್ಮರಿಸಿಕೊಳ್ಳುವುದರ ಮೂಲಕ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ತತ್ವದಂತೆ, ಪ್ರಜಾಸತ್ತಾತ್ಮಕ ರಾಷ್ಟ್ರದ ಪರಿಕಲ್ಪನೆಯನ್ನು ಸಕಾರಗೊಳಿಸೋಣ ಎಂದು ತಿಳಿಸಿದರು.

andolanait

Recent Posts

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

18 mins ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

23 mins ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

38 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

1 hour ago

ಅಕ್ರಮ ಗಾಂಜಾ ಮಾರಾಟ: ಮಹಿಳೆ ಬಂಧನ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

1 hour ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

2 hours ago