ಜಿಲ್ಲೆಗಳು

ಸಂಘರ್ಷದ ವಿಡಿಯೋ ಇತ್ತೀಚಿನದ್ದಲ್ಲ: ಭಾರತೀಯ ಸೇನೆ ಸ್ಪಷ್ಟನೆ

ಮೈಸೂರು: ಭಾರತ-ಚೀನಾ ನಡುವಿನ ಗಡಿಯಲ್ಲಿ ಮತ್ತೊಮ್ಮೆ ಎರಡು ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಅರುಣಾಚಲ ಪ್ರದೇಶದ ತವಾಂಗ್ ಗಡಿಯಲ್ಲಿ ಗಡಿ ದಾಟಲು ಯತ್ನಿಸಿದ ಚೀನಾದ ಸುಮಾರು 300 ಯೋಧರನ್ನು ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಸಂಘರ್ಷದಲ್ಲಿ ಭಾರತದ ಆರು ಯೋಧರು ಗಾಯಗೊಂಡಿದ್ದಾರೆ.
ಈ ನಡುವೆ ಭಾರತ ಸೈನಿಕರು, ಚೀನಾ ಸೈನಿಕರನ್ನು ಹಿಮ್ಮೆಟ್ಟಿಸಿದ್ದಾರೆನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆದರೆ ಈ ವಿಡಿಯೋ ಈ ವರ್ಷದಲ್ಲ, ಬದಲಾಗಿ ಕಳೆದ ವರ್ಷದ್ದು ಎನ್ನಲಾಗಿದೆ.

ಭಾರತ ಹಾಗೂ ಚೀನಾ ಸೈನಿಕರ ನಡುವಿನ ಸಂಘರ್ಷ ಕುರಿತಂತೆ ಕೇಂದ್ರ ಸರ್ಕಾರ ಸದನದಲ್ಲಿ ಸ್ಪಷ್ಟನೆ ನೀಡಿದ ಒಂದು ದಿನದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಅರುಣಾಚಲ ಪ್ರದೇಶದ ವಾಸ್ತವ ಗಡಿ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಭಾರತ-ಚೀನಾ ಸೈನಿಕರು ಪರಸ್ಪರ ಎದುರಾಗಿದ್ದು, ಭಾರತೀಯ ಸೈನಿಕರು ಲಾಠಿಗಳ ಮೂಲಕ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುತ್ತಿರುವುದನ್ನು ಕಾಣಬಹುದು. ಆದರೆ ಈ ವಿಡಿಯೋ ಡಿಸೆಂಬರ್ 09 ರಂದು ನಡೆದಿರುವ ಸಂಘರ್ಷದ ವಿಡಿಯೋ ಅಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ವಿಡಿಯೋದಲ್ಲಿ ಬರುವ ಧ್ವನಿಯಲ್ಲಿ ಭಾರತ ಸೈನಿಕನೊಬ್ಬ ಪಂಜಾಬಿ ಭಾಷೆಯಲ್ಲಿ ಮಾತನಾಡಿದ್ದು, “ಅವರನ್ನು ಜೋರಾಗಿ ಹೊಡಿರಿ, ಮತ್ತೆ ಅವರು ವಾಪಸ್ ಬರೋದಿಲ್ಲ” ಎಂದು ಹೇಳಿದ್ದಾರೆ. ಮತ್ತೋರ್ವ ಸೈನಿಕ ಹಿಂದಿಯಲ್ಲಿ, “ಅವರ ತಲೆ ಮೇಲೆ ಹೊಡೆಯಿರಿ, ಮಾರೋ ಮಾರೋ.. ಅವರು ವಾಪಸ್ ಬರಬಾರದು. ಅವರನ್ನು ಓಡಿಸಿ” ಎಂದು ಹೇಳಿದ್ದಾರೆ.
ಚೀನಾದ ಸೈನಿಕರನ್ನು ಭಾರತೀಯ ಸೈನಿಕರು ಲಾಠಿ, ದೊಣ್ಣೆಯಿಂದ ಹೊಡೆಯುವುದು, ಮುಷ್ಟಿಯನ್ನು ಬಳಸಿ ಹೊಡೆತ ನೀಡಿ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುವುದನ್ನು ಕಾಣಬಹುದು. ಭಾರತೀಯ ಸೈನಿಕರ ಹೊಡೆತಗಳನ್ನು ತಡಿಯಲಾಗದೆ ಚೀನಾ ಸೈನಿಕರು ಎದ್ನೋ ಬಿದ್ನೋ ಎಂದು ಅಲ್ಲಿಂದ ಕಾಲ್ಕಿತ್ತಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.
ಆದರೆ, ಸದ್ಯ ವೈರಲ್ ಆಗುತ್ತಿರೋ ವಿಡಿಯೋ ಡಿಸೆಂಬರ್ 09 ರಂದು ನಡೆದಿರುವ ಸಂಘರ್ಷದ ವಿಡಿಯೋ ಅಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ಲಡಾಖ್ನ ಗಲ್ವಾನ್ನಲ್ಲಿ ನಡೆದ ಸಂಘರ್ಷದ ಬಳಿಕ ಬಹುಶಃ ಈ ದಾಳಿ ನಡೆದಿರಬಹುದು ಎಂದು ತಿಳಿಸಿದೆ.
ಚೀನಾದ ಎಷ್ಟು ಸೈನಿಕರು ಗಾಯಗೊಂಡಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಚೀನಾದಲ್ಲಿ ಕೊರೋನಾ ಲಾಕ್ಡೌನ್ನಿಂದ ಜನರು ಅಲ್ಲಿನ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.ಚೀನಾ ಜನರ ಗಮನವನ್ನು ಬೇರೆಡೆ ಸೆಳೆಯುವ ಕಾರಣಕ್ಕಾಗಿ ಸರ್ಕಾರ ಸೈನಿಕರ ಮೂಲಕ ಈ ಕೆಲಸ ಮಾಡಿಸಿರಬಹುದಎಂದು ಭಾರತದ ಮಾಜಿ ಸೇನಾ ಅಧಿಕಾರಿಗಳು ಅಭಿಪ್ರಾಯಟ್ಟಿದ್ದಾರೆ

andolanait

Recent Posts

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

17 mins ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

49 mins ago

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…

1 hour ago

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…

1 hour ago

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

2 hours ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

2 hours ago