ಜಿಲ್ಲೆಗಳು

ಸಂಘರ್ಷದ ವಿಡಿಯೋ ಇತ್ತೀಚಿನದ್ದಲ್ಲ: ಭಾರತೀಯ ಸೇನೆ ಸ್ಪಷ್ಟನೆ

ಮೈಸೂರು: ಭಾರತ-ಚೀನಾ ನಡುವಿನ ಗಡಿಯಲ್ಲಿ ಮತ್ತೊಮ್ಮೆ ಎರಡು ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಅರುಣಾಚಲ ಪ್ರದೇಶದ ತವಾಂಗ್ ಗಡಿಯಲ್ಲಿ ಗಡಿ ದಾಟಲು ಯತ್ನಿಸಿದ ಚೀನಾದ ಸುಮಾರು 300 ಯೋಧರನ್ನು ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಸಂಘರ್ಷದಲ್ಲಿ ಭಾರತದ ಆರು ಯೋಧರು ಗಾಯಗೊಂಡಿದ್ದಾರೆ.
ಈ ನಡುವೆ ಭಾರತ ಸೈನಿಕರು, ಚೀನಾ ಸೈನಿಕರನ್ನು ಹಿಮ್ಮೆಟ್ಟಿಸಿದ್ದಾರೆನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆದರೆ ಈ ವಿಡಿಯೋ ಈ ವರ್ಷದಲ್ಲ, ಬದಲಾಗಿ ಕಳೆದ ವರ್ಷದ್ದು ಎನ್ನಲಾಗಿದೆ.

ಭಾರತ ಹಾಗೂ ಚೀನಾ ಸೈನಿಕರ ನಡುವಿನ ಸಂಘರ್ಷ ಕುರಿತಂತೆ ಕೇಂದ್ರ ಸರ್ಕಾರ ಸದನದಲ್ಲಿ ಸ್ಪಷ್ಟನೆ ನೀಡಿದ ಒಂದು ದಿನದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಅರುಣಾಚಲ ಪ್ರದೇಶದ ವಾಸ್ತವ ಗಡಿ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಭಾರತ-ಚೀನಾ ಸೈನಿಕರು ಪರಸ್ಪರ ಎದುರಾಗಿದ್ದು, ಭಾರತೀಯ ಸೈನಿಕರು ಲಾಠಿಗಳ ಮೂಲಕ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುತ್ತಿರುವುದನ್ನು ಕಾಣಬಹುದು. ಆದರೆ ಈ ವಿಡಿಯೋ ಡಿಸೆಂಬರ್ 09 ರಂದು ನಡೆದಿರುವ ಸಂಘರ್ಷದ ವಿಡಿಯೋ ಅಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ವಿಡಿಯೋದಲ್ಲಿ ಬರುವ ಧ್ವನಿಯಲ್ಲಿ ಭಾರತ ಸೈನಿಕನೊಬ್ಬ ಪಂಜಾಬಿ ಭಾಷೆಯಲ್ಲಿ ಮಾತನಾಡಿದ್ದು, “ಅವರನ್ನು ಜೋರಾಗಿ ಹೊಡಿರಿ, ಮತ್ತೆ ಅವರು ವಾಪಸ್ ಬರೋದಿಲ್ಲ” ಎಂದು ಹೇಳಿದ್ದಾರೆ. ಮತ್ತೋರ್ವ ಸೈನಿಕ ಹಿಂದಿಯಲ್ಲಿ, “ಅವರ ತಲೆ ಮೇಲೆ ಹೊಡೆಯಿರಿ, ಮಾರೋ ಮಾರೋ.. ಅವರು ವಾಪಸ್ ಬರಬಾರದು. ಅವರನ್ನು ಓಡಿಸಿ” ಎಂದು ಹೇಳಿದ್ದಾರೆ.
ಚೀನಾದ ಸೈನಿಕರನ್ನು ಭಾರತೀಯ ಸೈನಿಕರು ಲಾಠಿ, ದೊಣ್ಣೆಯಿಂದ ಹೊಡೆಯುವುದು, ಮುಷ್ಟಿಯನ್ನು ಬಳಸಿ ಹೊಡೆತ ನೀಡಿ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುವುದನ್ನು ಕಾಣಬಹುದು. ಭಾರತೀಯ ಸೈನಿಕರ ಹೊಡೆತಗಳನ್ನು ತಡಿಯಲಾಗದೆ ಚೀನಾ ಸೈನಿಕರು ಎದ್ನೋ ಬಿದ್ನೋ ಎಂದು ಅಲ್ಲಿಂದ ಕಾಲ್ಕಿತ್ತಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.
ಆದರೆ, ಸದ್ಯ ವೈರಲ್ ಆಗುತ್ತಿರೋ ವಿಡಿಯೋ ಡಿಸೆಂಬರ್ 09 ರಂದು ನಡೆದಿರುವ ಸಂಘರ್ಷದ ವಿಡಿಯೋ ಅಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ಲಡಾಖ್ನ ಗಲ್ವಾನ್ನಲ್ಲಿ ನಡೆದ ಸಂಘರ್ಷದ ಬಳಿಕ ಬಹುಶಃ ಈ ದಾಳಿ ನಡೆದಿರಬಹುದು ಎಂದು ತಿಳಿಸಿದೆ.
ಚೀನಾದ ಎಷ್ಟು ಸೈನಿಕರು ಗಾಯಗೊಂಡಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಚೀನಾದಲ್ಲಿ ಕೊರೋನಾ ಲಾಕ್ಡೌನ್ನಿಂದ ಜನರು ಅಲ್ಲಿನ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.ಚೀನಾ ಜನರ ಗಮನವನ್ನು ಬೇರೆಡೆ ಸೆಳೆಯುವ ಕಾರಣಕ್ಕಾಗಿ ಸರ್ಕಾರ ಸೈನಿಕರ ಮೂಲಕ ಈ ಕೆಲಸ ಮಾಡಿಸಿರಬಹುದಎಂದು ಭಾರತದ ಮಾಜಿ ಸೇನಾ ಅಧಿಕಾರಿಗಳು ಅಭಿಪ್ರಾಯಟ್ಟಿದ್ದಾರೆ

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago