ಜಿಲ್ಲೆಗಳು

ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ವತಿಯಿಂದ ವಿಶ್ವ ಘೇಂಡಾಮೃಗ ದಿನ ಆಚರಣೆ

ಮೈಸೂರು : ನಗರದ ಮೃಗಾಲಯದಲ್ಲಿಂದು ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ವತಿಯಿಂದ ವಿಶ್ವ ಘೇಂಡಾಮೃಗ ದಿನವನ್ನು ಆಚರಣೆ ಮಾಡಲಾಯಿತು.
ಮೃಗಾಲಯದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಇಂಡಿಯಾದ ವಿರಾಟ್ ಮತ್ತು ಬಬ್ಲಿ ಘೆಂಡಾ ಮೃಗಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಕಂಪೆನಿ ದತ್ತು ತೆಗೆದುಕೊಂಡಿತ್ತು.
ಕಾರ್ಯಕ್ರಮದಲ್ಲಿ ಹಾಜರಿದ್ದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ಟಿ. ಪಳನಿಕುಮಾರ್  ಅವರು  ಮಾತನಾಡಿ ಭೂಮಿಯ ವೈಶಿಷ್ಟಪೂರ್ಣ ಜೀವಿಯಲ್ಲಿ ಒಂದಾಗಿರುವ ಘೆಂಡಾ ಮೃಗಗಳ ಸಂರಕ್ಷಣೆಗೆ ದೇಶದ ನಾಗರಿಕರು ಹೆಚ್ಚಿನ ಕಾಳಜಿ ವಹಿಸಬೇಕು, ಬೇಟೆಯಾಡುವುದನ್ನು ನಿಲ್ಲಿಸಬೇಕು ,ಹವಾಮಾನ ಬದಲಾವಣೆ ಮುಂತಾದ ಅಂಶಗಳಿಂದ ಈ ಪ್ರಾಣಿಗಳು ಅಳಿವಿನತ್ತ ಸಾಗಿವೆ. ಜನರು ಇವುಗಳ ಬಗ್ಗೆ ಜಾಗೃತರಾಗಿ ಸಂರಕ್ಷಣೆ ಮಾಡುವ ಮೂಲಕ ಮುಂದಿನ ಯುವಪೀಳಿಗೆಗೆ ಮಾದರಿಯಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಘೆ೦ಡಾಮೃಗಗಳ ಸಂರಕ್ಷಣೆ ಮಾಡುವಂತೆ ಜಾಗೃತಿ ಮೂಡಿಸಲಾಯಿತು .ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ , ಮೃಗಾಲಯದ ಕಾರ್ಯವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ,ವಿಭಾಗೀಯ ವ್ಯವಸ್ಥಾಪಕ ರಾದ ಸುನೀಲ್ ಕುಮಾರ್ ಮಿಶ್ರಾ ,ಮುರಳೀಧರ್ ,ಕಂಪನಿಯ ಮಾರುಕಟ್ಟೆ ಅಧಿಕಾರಿಗಳು ,ಪ್ರಮುಖ ವಿತರಕರು ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

2010 ರಲ್ಲಿ ಮೊದಲ ಬಾರಿಗೆ ಸೌತ್‌ ಆಫ್ರಿಕಾದಲ್ಲಿ ವಿಶ್ವ ಘೇಂಡಾಮೃಗ ದಿನ ಆಚರಿಸಲಾಯಿತು. 2011 ರಿಂದ ವಿಶ್ವದಾದ್ಯಂತ ಪ್ರತಿ ವರ್ಷ ಸೆ. 22 ರಂದು ಈ ದಿನ ಆಚರಿಸಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಇಂದು ಚಾಮರಾಜೇಂದ್ರ ಮೃಗಾಲಯದಲ್ಲಿ ಆಚರಿಸಲಾಯಿತು.

andolanait

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

2 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

3 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

3 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

3 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

4 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

4 hours ago