ಜಿಲ್ಲೆಗಳು

ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ವತಿಯಿಂದ ವಿಶ್ವ ಘೇಂಡಾಮೃಗ ದಿನ ಆಚರಣೆ

ಮೈಸೂರು : ನಗರದ ಮೃಗಾಲಯದಲ್ಲಿಂದು ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ವತಿಯಿಂದ ವಿಶ್ವ ಘೇಂಡಾಮೃಗ ದಿನವನ್ನು ಆಚರಣೆ ಮಾಡಲಾಯಿತು.
ಮೃಗಾಲಯದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಇಂಡಿಯಾದ ವಿರಾಟ್ ಮತ್ತು ಬಬ್ಲಿ ಘೆಂಡಾ ಮೃಗಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಕಂಪೆನಿ ದತ್ತು ತೆಗೆದುಕೊಂಡಿತ್ತು.
ಕಾರ್ಯಕ್ರಮದಲ್ಲಿ ಹಾಜರಿದ್ದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ಟಿ. ಪಳನಿಕುಮಾರ್  ಅವರು  ಮಾತನಾಡಿ ಭೂಮಿಯ ವೈಶಿಷ್ಟಪೂರ್ಣ ಜೀವಿಯಲ್ಲಿ ಒಂದಾಗಿರುವ ಘೆಂಡಾ ಮೃಗಗಳ ಸಂರಕ್ಷಣೆಗೆ ದೇಶದ ನಾಗರಿಕರು ಹೆಚ್ಚಿನ ಕಾಳಜಿ ವಹಿಸಬೇಕು, ಬೇಟೆಯಾಡುವುದನ್ನು ನಿಲ್ಲಿಸಬೇಕು ,ಹವಾಮಾನ ಬದಲಾವಣೆ ಮುಂತಾದ ಅಂಶಗಳಿಂದ ಈ ಪ್ರಾಣಿಗಳು ಅಳಿವಿನತ್ತ ಸಾಗಿವೆ. ಜನರು ಇವುಗಳ ಬಗ್ಗೆ ಜಾಗೃತರಾಗಿ ಸಂರಕ್ಷಣೆ ಮಾಡುವ ಮೂಲಕ ಮುಂದಿನ ಯುವಪೀಳಿಗೆಗೆ ಮಾದರಿಯಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಘೆ೦ಡಾಮೃಗಗಳ ಸಂರಕ್ಷಣೆ ಮಾಡುವಂತೆ ಜಾಗೃತಿ ಮೂಡಿಸಲಾಯಿತು .ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ , ಮೃಗಾಲಯದ ಕಾರ್ಯವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ,ವಿಭಾಗೀಯ ವ್ಯವಸ್ಥಾಪಕ ರಾದ ಸುನೀಲ್ ಕುಮಾರ್ ಮಿಶ್ರಾ ,ಮುರಳೀಧರ್ ,ಕಂಪನಿಯ ಮಾರುಕಟ್ಟೆ ಅಧಿಕಾರಿಗಳು ,ಪ್ರಮುಖ ವಿತರಕರು ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

2010 ರಲ್ಲಿ ಮೊದಲ ಬಾರಿಗೆ ಸೌತ್‌ ಆಫ್ರಿಕಾದಲ್ಲಿ ವಿಶ್ವ ಘೇಂಡಾಮೃಗ ದಿನ ಆಚರಿಸಲಾಯಿತು. 2011 ರಿಂದ ವಿಶ್ವದಾದ್ಯಂತ ಪ್ರತಿ ವರ್ಷ ಸೆ. 22 ರಂದು ಈ ದಿನ ಆಚರಿಸಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಇಂದು ಚಾಮರಾಜೇಂದ್ರ ಮೃಗಾಲಯದಲ್ಲಿ ಆಚರಿಸಲಾಯಿತು.

andolanait

Recent Posts

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

2 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

3 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

6 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

10 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

10 hours ago