ಜಿಲ್ಲೆಗಳು

ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ವತಿಯಿಂದ ವಿಶ್ವ ಘೇಂಡಾಮೃಗ ದಿನ ಆಚರಣೆ

ಮೈಸೂರು : ನಗರದ ಮೃಗಾಲಯದಲ್ಲಿಂದು ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ವತಿಯಿಂದ ವಿಶ್ವ ಘೇಂಡಾಮೃಗ ದಿನವನ್ನು ಆಚರಣೆ ಮಾಡಲಾಯಿತು.
ಮೃಗಾಲಯದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಇಂಡಿಯಾದ ವಿರಾಟ್ ಮತ್ತು ಬಬ್ಲಿ ಘೆಂಡಾ ಮೃಗಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಕಂಪೆನಿ ದತ್ತು ತೆಗೆದುಕೊಂಡಿತ್ತು.
ಕಾರ್ಯಕ್ರಮದಲ್ಲಿ ಹಾಜರಿದ್ದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ಟಿ. ಪಳನಿಕುಮಾರ್  ಅವರು  ಮಾತನಾಡಿ ಭೂಮಿಯ ವೈಶಿಷ್ಟಪೂರ್ಣ ಜೀವಿಯಲ್ಲಿ ಒಂದಾಗಿರುವ ಘೆಂಡಾ ಮೃಗಗಳ ಸಂರಕ್ಷಣೆಗೆ ದೇಶದ ನಾಗರಿಕರು ಹೆಚ್ಚಿನ ಕಾಳಜಿ ವಹಿಸಬೇಕು, ಬೇಟೆಯಾಡುವುದನ್ನು ನಿಲ್ಲಿಸಬೇಕು ,ಹವಾಮಾನ ಬದಲಾವಣೆ ಮುಂತಾದ ಅಂಶಗಳಿಂದ ಈ ಪ್ರಾಣಿಗಳು ಅಳಿವಿನತ್ತ ಸಾಗಿವೆ. ಜನರು ಇವುಗಳ ಬಗ್ಗೆ ಜಾಗೃತರಾಗಿ ಸಂರಕ್ಷಣೆ ಮಾಡುವ ಮೂಲಕ ಮುಂದಿನ ಯುವಪೀಳಿಗೆಗೆ ಮಾದರಿಯಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಘೆ೦ಡಾಮೃಗಗಳ ಸಂರಕ್ಷಣೆ ಮಾಡುವಂತೆ ಜಾಗೃತಿ ಮೂಡಿಸಲಾಯಿತು .ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ , ಮೃಗಾಲಯದ ಕಾರ್ಯವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ,ವಿಭಾಗೀಯ ವ್ಯವಸ್ಥಾಪಕ ರಾದ ಸುನೀಲ್ ಕುಮಾರ್ ಮಿಶ್ರಾ ,ಮುರಳೀಧರ್ ,ಕಂಪನಿಯ ಮಾರುಕಟ್ಟೆ ಅಧಿಕಾರಿಗಳು ,ಪ್ರಮುಖ ವಿತರಕರು ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

2010 ರಲ್ಲಿ ಮೊದಲ ಬಾರಿಗೆ ಸೌತ್‌ ಆಫ್ರಿಕಾದಲ್ಲಿ ವಿಶ್ವ ಘೇಂಡಾಮೃಗ ದಿನ ಆಚರಿಸಲಾಯಿತು. 2011 ರಿಂದ ವಿಶ್ವದಾದ್ಯಂತ ಪ್ರತಿ ವರ್ಷ ಸೆ. 22 ರಂದು ಈ ದಿನ ಆಚರಿಸಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಇಂದು ಚಾಮರಾಜೇಂದ್ರ ಮೃಗಾಲಯದಲ್ಲಿ ಆಚರಿಸಲಾಯಿತು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

12 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

14 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago