Mysore
21
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ : ರಾಜ್ಯ ಸರ್ಕಾರದ ಮೇಲೆ ಎಚ್ ಡಿಡಿ ಆಕ್ರೋಶ

ಮಂಡ್ಯ : ಇಷ್ಟೊಂದು ಬೇಜವಾಬ್ದಾರಿ ಸರ್ಕಾರವನ್ನು ನಾನು ಎಂದೂ ನೋಡಿಲ್ಲ. ರೈತರು, ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಕ್ರೋಶ. 

ಟನ್ ಕಬ್ಬಿನಗೆ 4500ರೂ, ಪ್ರತೀ ಲೀಟರ್ ಹಾಲಿಗೆ 40 ರೂ. ಸೇರಿದಂತೆ ರೈತರ ಬೇಡಿಕೆಗಳನ್ನು ಪ್ರತಿ ಸಲ್ಲಿಸುವಂತೆ ಒತ್ತಾಯಿಸಿ ಕಳೆದ 25 ದಿನಗಳಿಂದಲೂ ವಿಶ್ವೇಶ್ವರಯ್ಯನವರ ಬಳಿ ರೈತರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ ಯಾವೊಬ್ಬ ಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಿಡಿಕಾರಿದರು. 

ನಾನೂ ಸಹ ರೈತನ ಮಗನಾಗಿ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಕಂಡಿದ್ದೇನೆ. ನಿಮ್ಮ ಈ ಹೋರಾಟಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುತ್ತಿದ್ದೇನೆ ಎಂದು ಹೇಳಿದರು. 

ನೀವು ಕಳೆದ 25 ದಿನಗಳಿಂದ ಹೋರಾಟ ನಡೆಸುತ್ತಿದ್ದೀರಿ. ನಾನೂ ಸಹ ನಿಮ್ಮ ಪರವಾಗಿ ಹೋರಾಟ ಮಾಡುತ್ತೇನೆ. ನಿಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!