ಜಿಲ್ಲೆಗಳು

ಕೈಗಾರಿಕಾ ದಸರಾ ಉದ್ಘಾಟನೆ : ಐಎಸ್‍ಎಂಸಿಯಿಂದ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಮುಂದು

ಮೈಸೂರು : ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಕಷ್ಟು ಮುನ್ನಡೆ ಸಾಧಿಸುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಐಎಸ್‍ಎಂಸಿ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರಕಟಿಸಿದ್ದಾರೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಯುಕ್ತ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿಯಾಗಿ ಏರ್ಪಡಿಸಿದ್ದ ಕೈಗಾರಿಕಾ ದಸರಾ ಉದ್ಘಾಟಿಸಿ ಅವರು ಮಾತನಾಡಿದರು. ಐಎಸ್‍ಎಂಸಿ ಕಂಪನಿಯು ಸುಮಾರು 23 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದ್ದು, ಸೆಮಿಕಂಡಕ್ಟರ್ ಪ್ಯಾಬ್ ಸ್ಥಾಪಿಸಲು ರಾಜ್ಯಸರ್ಕಾರೊಂದಿಗೆ ಎಂಒಯುಗೆ ಸಹಿ ಹಾಕಿದೆ. ಇದರಿಂದ ಈ ಭಾಗದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಸಾಕಷ್ಟು ಕೈಗಾರಿಕೆಗಳು ಸ್ಥಾಪನೆಯಾಗಿರುವುದರಿಂದ ನಮ್ಮ ಸರ್ಕಾರ 2 ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚು ಒತ್ತು ಕೊಡುತ್ತಿದೆ. ಮೈಸೂರು ಕೂಡ ನಮ್ಮ ಆದ್ಯತೆಯ ನಗರಗಳಲ್ಲಿ ಒಂದಾಗಿದೆ ಎಂದು ನಿರಾಣಿ ಹೇಳಿದರು.
ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.ಇತ್ತೀಚೆಗೆ ದಾವೋಸ್, ಅಮೇರಿಕಾ ಹಾಗೂ ಜಪಾನ್‍ಗೆ ಭೇಟಿ ನೀಡಿದ ವೇಳೆ ವಿಶ್ವದ ಮುಂಚೂಣಿಯಲ್ಲಿರುವ ಉದ್ಯಮಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡಲು ಆಹ್ವಾನ ನೀಡಿದ್ದೇವೆ, ಅನೇಕರು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.
ಈ ಬಾರಿಯ ಹೂಡಿಕೆದಾರರ ಸಮಾವೇಶದಲ್ಲಿ ನಮಗೆ ಅಂದಾಜು 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಿ 10 ಲಕ್ಷ ಹುದ್ದೆಗಳು ಸೃಷ್ಟಿಯಾಗುವ ವಿಶ್ವಾಸವಿದೇ ಎಂದು ತಿಳಿಸಿದರು.ವಿಶ್ವದಲ್ಲೇ ಕೈಗಾರಿಕೆಗೆ ಹೊಸ ಮಾನ್ಯತೆ ತಂದುಕೊಟ್ಟ ನಾಲ್ವಡಿ ಕೃಷ್ಣರಾಜ ಒಡೆಯರ್ ನನಗೆ ಎಂದೆಂದಿಗೂ ಆದರ್ಶಪ್ರಾಯರು. ಈ ಸಂಸ್ಥಾನದಲಿ ದಿವಾನರಾಗಿದ್ದ ಸರ್ ಎಂ.ವಿಶ್ವೇಶ್ವರಯ್ಯನವರು ಕೂಡ ನನಗೆ ಪ್ರಾರ್ಥಸ್ಮರಣೀಯರು ಎಂದು ನಿರಾಣಿ ಅವರು ಸ್ಮರಿಸಿದರು. ಶತಮಾನಗಳ ಹಿಂದೆ ಕೈಗಾರಿಕೆಗಳ ಸ್ಥಾಪನೆಗೆ ಮುನ್ನುಡಿ ಬರೆದ ಮೊದಲ ಮಹರಾಜರಾಜರೆಂದರೆ ನಾಲ್ವಡಿ ಕೃಷ್ಣರಾಜ ಒಡೆಯರ್. ಕರ್ನಾಟಕ ಇಂದು ಕೈಗಾರಿಕೆ, ಶಿಕ್ಷಣ, ಆರೋಗ್ಯ ನೀರಾವರಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇಷ್ಟು ಸಾಧನೆ ಮಾಡಿದೆ ಎಂದರೆ ಅದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣ ಎಂದು ಮುಕ್ತ ಕಂಠದಿಂದ ಹೊಗಳಿದರು.

ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ನಮ್ಮ ಶಿಕ್ಷಣ ಸಂಸ್ಥೆ ಸೇರಿದಂತೆ ಮತ್ತಿತರ ಕಡೆ ಕಡ್ಡಾಯವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ವಿಶ್ವೇಶ್ವರಯ್ಯನವರ ಪ್ರತಿಮೆಗಳನ್ನ ಸ್ಥಾಪನೆ ಮಾಡಿ ಅವರ ಅದರ್ಶಗಳನ್ನು ಅನುಸರಿಸುತ್ತಿದ್ದೇವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಸೋಮಶೇಖರ್, ಶಾಸಕರಾದ ಹರ್ಷವರ್ಧನ,
ಎಲ್.ನಾಗೇಂದ್ರ, ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಬಗಾದಿ ಗೌತಮ್ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago