ಜಿಲ್ಲೆಗಳು

ಹಿಂದೂತ್ವದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ : ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರ ಕಾಂಗ್ರೆಸ್ ಭವನದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಪಕ್ಷ ಸಂಘಟನೆ ಮಾಡಬೇಕು. ಪಕ್ಷದಲ್ಲಿ ಜವಾಬ್ದಾರಿ ಹೊತ್ತಿರುವವರ ಪಾತ್ರ ಬಹಳ ಮುಖ್ಯವಾಗಿದೆ. ಕಾರ್ಯಕರ್ತರನ್ನು ಕಡೆಗಣಿಸದೆ ಎಲ್ಲರೊಂದಿಗೆ ಬೆರೆತು ಸಂಘಟಿಸಿದರೆ ಪಕ್ಷಕ್ಕೆ ಶಕ್ತಿ ಬರಲಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಂಘಟನೆ ದೊಡ್ಡ ಸವಾಲು. ಬೇರೆ ಪಕ್ಷಗಳ ನಾಯಕರು ಮಾಡುವ ಅಪಪ್ರಚಾರಕ್ಕೆ ಪ್ರತ್ಯುತ್ತರ ಕೊಡಬೇಕು. ಪಂಚಾಯತ್ ರಾಜ್ ಕನಸು ಕಾಂಗ್ರೆಸ್ ಕನಸಾಗಿತ್ತು. ಸ್ಥಳೀಯ ಜನರಿಗೆ ಅಧಿಕಾರ ಸಿಗುವಂತೆ ಮಾಡಲು ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆ ತರಲಾಯಿತು.‌ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತಂದಿದ್ದರಿಂದ ಲಕ್ಷಾಂತರ ನಾಯಕರು ಹುಟ್ಟಲು ಕಾರಣವಾಗಿದೆ.
ಪಕ್ಷದ ಸಂಘಟನೆ ಹೆಚ್ಚು ಮಾಡಬೇಕು. ಚುನಾವಣೆ ದಿನಗಳು ಹತ್ತಿರ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ ಮನಗೆ ತಲುಪಿಸಬೇಕು. ಶ್ರೀಮಂತರು,ಮೇಲ್ವರ್ಗದವರ ಪರ ಇದ್ದಾರೆ. ಹಿಂದೂತ್ವದ ಹೆಸರಿನಲ್ಲಿ ರಾಜಕೀಯ ಮಾಡಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಅಧ್ಯಕ್ಷರಾಗಿ ತೇಜು ಅವರನ್ನು ನೇಮಕ ಮಾಡಲಾಯಿತು.

ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ವಹಿಸಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

16 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

16 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

16 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

16 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

16 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago