ಮೈಸೂರು: ನಗರ ಕಾಂಗ್ರೆಸ್ ಭವನದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಪಕ್ಷ ಸಂಘಟನೆ ಮಾಡಬೇಕು. ಪಕ್ಷದಲ್ಲಿ ಜವಾಬ್ದಾರಿ ಹೊತ್ತಿರುವವರ ಪಾತ್ರ ಬಹಳ ಮುಖ್ಯವಾಗಿದೆ. ಕಾರ್ಯಕರ್ತರನ್ನು ಕಡೆಗಣಿಸದೆ ಎಲ್ಲರೊಂದಿಗೆ ಬೆರೆತು ಸಂಘಟಿಸಿದರೆ ಪಕ್ಷಕ್ಕೆ ಶಕ್ತಿ ಬರಲಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಂಘಟನೆ ದೊಡ್ಡ ಸವಾಲು. ಬೇರೆ ಪಕ್ಷಗಳ ನಾಯಕರು ಮಾಡುವ ಅಪಪ್ರಚಾರಕ್ಕೆ ಪ್ರತ್ಯುತ್ತರ ಕೊಡಬೇಕು. ಪಂಚಾಯತ್ ರಾಜ್ ಕನಸು ಕಾಂಗ್ರೆಸ್ ಕನಸಾಗಿತ್ತು. ಸ್ಥಳೀಯ ಜನರಿಗೆ ಅಧಿಕಾರ ಸಿಗುವಂತೆ ಮಾಡಲು ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆ ತರಲಾಯಿತು. ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತಂದಿದ್ದರಿಂದ ಲಕ್ಷಾಂತರ ನಾಯಕರು ಹುಟ್ಟಲು ಕಾರಣವಾಗಿದೆ.
ಪಕ್ಷದ ಸಂಘಟನೆ ಹೆಚ್ಚು ಮಾಡಬೇಕು. ಚುನಾವಣೆ ದಿನಗಳು ಹತ್ತಿರ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ ಮನಗೆ ತಲುಪಿಸಬೇಕು. ಶ್ರೀಮಂತರು,ಮೇಲ್ವರ್ಗದವರ ಪರ ಇದ್ದಾರೆ. ಹಿಂದೂತ್ವದ ಹೆಸರಿನಲ್ಲಿ ರಾಜಕೀಯ ಮಾಡಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಅಧ್ಯಕ್ಷರಾಗಿ ತೇಜು ಅವರನ್ನು ನೇಮಕ ಮಾಡಲಾಯಿತು.
ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ವಹಿಸಿದ್ದರು.
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…