ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ.ವಲಯದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಕೆ.ಗುಡಿ. ಜಂಗಲ್ ರೆಸಾರ್ಟ್ನ ವಾಹನದಲ್ಲಿ ಸಫಾರಿ ಹೊರಟಿದ್ದ ಪ್ರವಾಸಿಗರಿಗೆ ಅಣ್ಣಿಕೆರೆ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಅದರ ಗುದದ್ವಾರದ ಬಳಿ ಗಾಯವಾಗಿರುವುದು ಕಂಡುಬಂದಿದ್ದು ಪ್ರವಾಸಿಗರೊಬ್ಬರು ಪೊಟೋ ತೆಗೆದಿದ್ದಾರೆ.
ಹುಲಿಯ ಗುದದ್ವಾರದ ಬಳಿ ಕಿತ್ತುಹೊಗಿ ಮಾಂಸ ಖಂಡ ಹೊರಕ್ಕೆ ಕಾಣುತ್ತಿದೆ. ನೈಸರ್ಗಿಕವಾಗಿ ಅಥವಾ ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸುವಾಗ ಗಾಯಗೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಈ ಮಾಹಿತಿ ತಿಳಿದ ಕೆ.ಗುಡಿ. ವಲಯಾರಣ್ಯಾಧಿಕಾರಿ ವಿನೋದ್ ಗೌಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಹುಲಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಗಾಯಗೊಂಡಿರುವ ಹುಲಿ ಸುಳಿವು ದೊರೆತಿಲ್ಲ. ಅಲ್ಲದೆ ಹುಲಿ ಕಾಣಿಸಿಕೊಂಡ ಜಾಗ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗಿದೆ. ಆದರೆ, ಹುಲಿ ಪತ್ತೆಯಾಗಿಲ್ಲ ಎಂದು ವಿನೋದ್ ಗೌಡ ಅವರು ತಿಳಿಸಿದ್ದಾರೆ.
ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗುತ್ತಿದ್ದು, ಹುಲಿ ಸೆರೆಯಾದರೆ ಗಾಯವಾಗಿರುವುದನ್ನು ಗುರುತಿಸಲಾಗುವುದು. ಗಂಭೀರ ಗಾಯವಾಗಿದ್ದರೆ ಅರಣ್ಯ ಇಲಾಖೆ ಪಶು ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲು ಕ್ರಮ ವಹಿಸಲಾಗುವುದು ತಿಳಿಸಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…