ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ.ವಲಯದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಕೆ.ಗುಡಿ. ಜಂಗಲ್ ರೆಸಾರ್ಟ್ನ ವಾಹನದಲ್ಲಿ ಸಫಾರಿ ಹೊರಟಿದ್ದ ಪ್ರವಾಸಿಗರಿಗೆ ಅಣ್ಣಿಕೆರೆ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಅದರ ಗುದದ್ವಾರದ ಬಳಿ ಗಾಯವಾಗಿರುವುದು ಕಂಡುಬಂದಿದ್ದು ಪ್ರವಾಸಿಗರೊಬ್ಬರು ಪೊಟೋ ತೆಗೆದಿದ್ದಾರೆ.
ಹುಲಿಯ ಗುದದ್ವಾರದ ಬಳಿ ಕಿತ್ತುಹೊಗಿ ಮಾಂಸ ಖಂಡ ಹೊರಕ್ಕೆ ಕಾಣುತ್ತಿದೆ. ನೈಸರ್ಗಿಕವಾಗಿ ಅಥವಾ ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸುವಾಗ ಗಾಯಗೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಈ ಮಾಹಿತಿ ತಿಳಿದ ಕೆ.ಗುಡಿ. ವಲಯಾರಣ್ಯಾಧಿಕಾರಿ ವಿನೋದ್ ಗೌಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಹುಲಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಗಾಯಗೊಂಡಿರುವ ಹುಲಿ ಸುಳಿವು ದೊರೆತಿಲ್ಲ. ಅಲ್ಲದೆ ಹುಲಿ ಕಾಣಿಸಿಕೊಂಡ ಜಾಗ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗಿದೆ. ಆದರೆ, ಹುಲಿ ಪತ್ತೆಯಾಗಿಲ್ಲ ಎಂದು ವಿನೋದ್ ಗೌಡ ಅವರು ತಿಳಿಸಿದ್ದಾರೆ.
ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗುತ್ತಿದ್ದು, ಹುಲಿ ಸೆರೆಯಾದರೆ ಗಾಯವಾಗಿರುವುದನ್ನು ಗುರುತಿಸಲಾಗುವುದು. ಗಂಭೀರ ಗಾಯವಾಗಿದ್ದರೆ ಅರಣ್ಯ ಇಲಾಖೆ ಪಶು ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲು ಕ್ರಮ ವಹಿಸಲಾಗುವುದು ತಿಳಿಸಿದ್ದಾರೆ.
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…
ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್…