ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ.ವಲಯದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಕೆ.ಗುಡಿ. ಜಂಗಲ್ ರೆಸಾರ್ಟ್ನ ವಾಹನದಲ್ಲಿ ಸಫಾರಿ ಹೊರಟಿದ್ದ ಪ್ರವಾಸಿಗರಿಗೆ ಅಣ್ಣಿಕೆರೆ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಅದರ ಗುದದ್ವಾರದ ಬಳಿ ಗಾಯವಾಗಿರುವುದು ಕಂಡುಬಂದಿದ್ದು ಪ್ರವಾಸಿಗರೊಬ್ಬರು ಪೊಟೋ ತೆಗೆದಿದ್ದಾರೆ.
ಹುಲಿಯ ಗುದದ್ವಾರದ ಬಳಿ ಕಿತ್ತುಹೊಗಿ ಮಾಂಸ ಖಂಡ ಹೊರಕ್ಕೆ ಕಾಣುತ್ತಿದೆ. ನೈಸರ್ಗಿಕವಾಗಿ ಅಥವಾ ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸುವಾಗ ಗಾಯಗೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಈ ಮಾಹಿತಿ ತಿಳಿದ ಕೆ.ಗುಡಿ. ವಲಯಾರಣ್ಯಾಧಿಕಾರಿ ವಿನೋದ್ ಗೌಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಹುಲಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಗಾಯಗೊಂಡಿರುವ ಹುಲಿ ಸುಳಿವು ದೊರೆತಿಲ್ಲ. ಅಲ್ಲದೆ ಹುಲಿ ಕಾಣಿಸಿಕೊಂಡ ಜಾಗ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗಿದೆ. ಆದರೆ, ಹುಲಿ ಪತ್ತೆಯಾಗಿಲ್ಲ ಎಂದು ವಿನೋದ್ ಗೌಡ ಅವರು ತಿಳಿಸಿದ್ದಾರೆ.
ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗುತ್ತಿದ್ದು, ಹುಲಿ ಸೆರೆಯಾದರೆ ಗಾಯವಾಗಿರುವುದನ್ನು ಗುರುತಿಸಲಾಗುವುದು. ಗಂಭೀರ ಗಾಯವಾಗಿದ್ದರೆ ಅರಣ್ಯ ಇಲಾಖೆ ಪಶು ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲು ಕ್ರಮ ವಹಿಸಲಾಗುವುದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…