ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ.ವಲಯದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಕೆ.ಗುಡಿ. ಜಂಗಲ್ ರೆಸಾರ್ಟ್ನ ವಾಹನದಲ್ಲಿ ಸಫಾರಿ ಹೊರಟಿದ್ದ ಪ್ರವಾಸಿಗರಿಗೆ ಅಣ್ಣಿಕೆರೆ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಅದರ ಗುದದ್ವಾರದ ಬಳಿ ಗಾಯವಾಗಿರುವುದು ಕಂಡುಬಂದಿದ್ದು ಪ್ರವಾಸಿಗರೊಬ್ಬರು ಪೊಟೋ ತೆಗೆದಿದ್ದಾರೆ.
ಹುಲಿಯ ಗುದದ್ವಾರದ ಬಳಿ ಕಿತ್ತುಹೊಗಿ ಮಾಂಸ ಖಂಡ ಹೊರಕ್ಕೆ ಕಾಣುತ್ತಿದೆ. ನೈಸರ್ಗಿಕವಾಗಿ ಅಥವಾ ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸುವಾಗ ಗಾಯಗೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಈ ಮಾಹಿತಿ ತಿಳಿದ ಕೆ.ಗುಡಿ. ವಲಯಾರಣ್ಯಾಧಿಕಾರಿ ವಿನೋದ್ ಗೌಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಹುಲಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಗಾಯಗೊಂಡಿರುವ ಹುಲಿ ಸುಳಿವು ದೊರೆತಿಲ್ಲ. ಅಲ್ಲದೆ ಹುಲಿ ಕಾಣಿಸಿಕೊಂಡ ಜಾಗ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗಿದೆ. ಆದರೆ, ಹುಲಿ ಪತ್ತೆಯಾಗಿಲ್ಲ ಎಂದು ವಿನೋದ್ ಗೌಡ ಅವರು ತಿಳಿಸಿದ್ದಾರೆ.
ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗುತ್ತಿದ್ದು, ಹುಲಿ ಸೆರೆಯಾದರೆ ಗಾಯವಾಗಿರುವುದನ್ನು ಗುರುತಿಸಲಾಗುವುದು. ಗಂಭೀರ ಗಾಯವಾಗಿದ್ದರೆ ಅರಣ್ಯ ಇಲಾಖೆ ಪಶು ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲು ಕ್ರಮ ವಹಿಸಲಾಗುವುದು ತಿಳಿಸಿದ್ದಾರೆ.
ಮಂಜು ಕೋಟೆ ದಾಖಲೆ ಸೃಷ್ಟಿಸಿದ ಫಲಿತಾಂಶ; ಕ್ಷೇತ್ರ ಶಿಕ್ಷಣಾಧಿಕಾರಿ, ವಿದ್ಯಾರ್ಥಿ ವೇದಶ್ರೀ ಅವರಿಗೆ ಶಾಸಕರಿಂದ ಸನ್ಮಾನ ಎಚ್.ಡಿ.ಕೋಟೆ: ತಾಲ್ಲೂಕಿನ ಇತಿಹಾಸದಲ್ಲಿ…
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…