ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ.ವಲಯದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಕೆ.ಗುಡಿ. ಜಂಗಲ್ ರೆಸಾರ್ಟ್ನ ವಾಹನದಲ್ಲಿ ಸಫಾರಿ ಹೊರಟಿದ್ದ ಪ್ರವಾಸಿಗರಿಗೆ ಅಣ್ಣಿಕೆರೆ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಅದರ ಗುದದ್ವಾರದ ಬಳಿ ಗಾಯವಾಗಿರುವುದು ಕಂಡುಬಂದಿದ್ದು ಪ್ರವಾಸಿಗರೊಬ್ಬರು ಪೊಟೋ ತೆಗೆದಿದ್ದಾರೆ.
ಹುಲಿಯ ಗುದದ್ವಾರದ ಬಳಿ ಕಿತ್ತುಹೊಗಿ ಮಾಂಸ ಖಂಡ ಹೊರಕ್ಕೆ ಕಾಣುತ್ತಿದೆ. ನೈಸರ್ಗಿಕವಾಗಿ ಅಥವಾ ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸುವಾಗ ಗಾಯಗೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಈ ಮಾಹಿತಿ ತಿಳಿದ ಕೆ.ಗುಡಿ. ವಲಯಾರಣ್ಯಾಧಿಕಾರಿ ವಿನೋದ್ ಗೌಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಹುಲಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಗಾಯಗೊಂಡಿರುವ ಹುಲಿ ಸುಳಿವು ದೊರೆತಿಲ್ಲ. ಅಲ್ಲದೆ ಹುಲಿ ಕಾಣಿಸಿಕೊಂಡ ಜಾಗ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗಿದೆ. ಆದರೆ, ಹುಲಿ ಪತ್ತೆಯಾಗಿಲ್ಲ ಎಂದು ವಿನೋದ್ ಗೌಡ ಅವರು ತಿಳಿಸಿದ್ದಾರೆ.
ಕ್ಯಾಮರಾ ಟ್ರ್ಯಾಪಿಂಗ್ ಮಾಡಲಾಗುತ್ತಿದ್ದು, ಹುಲಿ ಸೆರೆಯಾದರೆ ಗಾಯವಾಗಿರುವುದನ್ನು ಗುರುತಿಸಲಾಗುವುದು. ಗಂಭೀರ ಗಾಯವಾಗಿದ್ದರೆ ಅರಣ್ಯ ಇಲಾಖೆ ಪಶು ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲು ಕ್ರಮ ವಹಿಸಲಾಗುವುದು ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…