Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್ ರಿಯಾಯಿತಿಗೆ ಒತ್ತಾಯ

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ಒದಗಿಸಿದ್ದರೂ ಜೀವನದ ಅಂಚಿನಲ್ಲಿರುವ ‘ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದ ಟಿಕೆಟ್‌ನಲ್ಲಿ ಹಿಂದೆ ಇದ್ದ ರಿಯಾಯಿತಿಯನ್ನು ಘೋಷಿಸಿಲ್ಲ. ಹಿರಿಯ ನಾಗರಿಕರಿಗೆ, ರೈಲ್ವೆ ಟಿಕೆಟ್ ರಿಯಾಯಿತಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷ ಬಿ.ಆರ್.ಉಮಾಕಾಂತ್ ಮನವಿ ಮಾಡಿದ್ದಾರೆ.

ಬಹಳ ವರ್ಷಗಳಿಂದಲೂ ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದಲ್ಲಿ ರಿಯಾಯಿತಿ ಇತ್ತು, ಕರೊನಾ ಸಂದರ್ಭದಲ್ಲಿ ರಿಯಾಯಿತಿ ಸ್ಥಗಿತಗೊಳಿಸಲಾಗಿತ್ತು. ಈಗ ರೈಲುಗಳ ಓಡಾಟ, ಜನಸಂದಣಿ ಎಲ್ಲಾ ಮೊದಲಿನಂತೆೆಯೇ ಇದೆ, ಆದರೂ ಹಿಂದೆ ಇದ್ದ ಪ್ರಮುಖವಾದ ರೈಲ್ವೆ ಟಿಕೆಟ್‌ನಲ್ಲಿ ರಿಯಾಯಿತಿಯ ಮೂಲಭೂತ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ಇನ್ನಾದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್ ರಿಯಾಯಿತಿಯನ್ನು ಪುನಾ ಘೊಷಿಸಬೇಕೆಂದು ಮೈಸೂರು ಜಿಲ್ಲಾ ಘಟಕದ ಹಿರಿಯ ನಾಗರಿಕರ ಸಂಘ ಒತ್ತಾಯಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ