ಮೈಸೂರು: ಕೇಂದ್ರ ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ಒದಗಿಸಿದ್ದರೂ ಜೀವನದ ಅಂಚಿನಲ್ಲಿರುವ ‘ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದ ಟಿಕೆಟ್ನಲ್ಲಿ ಹಿಂದೆ ಇದ್ದ ರಿಯಾಯಿತಿಯನ್ನು ಘೋಷಿಸಿಲ್ಲ. ಹಿರಿಯ ನಾಗರಿಕರಿಗೆ, ರೈಲ್ವೆ ಟಿಕೆಟ್ ರಿಯಾಯಿತಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷ ಬಿ.ಆರ್.ಉಮಾಕಾಂತ್ ಮನವಿ ಮಾಡಿದ್ದಾರೆ.
ಬಹಳ ವರ್ಷಗಳಿಂದಲೂ ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದಲ್ಲಿ ರಿಯಾಯಿತಿ ಇತ್ತು, ಕರೊನಾ ಸಂದರ್ಭದಲ್ಲಿ ರಿಯಾಯಿತಿ ಸ್ಥಗಿತಗೊಳಿಸಲಾಗಿತ್ತು. ಈಗ ರೈಲುಗಳ ಓಡಾಟ, ಜನಸಂದಣಿ ಎಲ್ಲಾ ಮೊದಲಿನಂತೆೆಯೇ ಇದೆ, ಆದರೂ ಹಿಂದೆ ಇದ್ದ ಪ್ರಮುಖವಾದ ರೈಲ್ವೆ ಟಿಕೆಟ್ನಲ್ಲಿ ರಿಯಾಯಿತಿಯ ಮೂಲಭೂತ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ಇನ್ನಾದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್ ರಿಯಾಯಿತಿಯನ್ನು ಪುನಾ ಘೊಷಿಸಬೇಕೆಂದು ಮೈಸೂರು ಜಿಲ್ಲಾ ಘಟಕದ ಹಿರಿಯ ನಾಗರಿಕರ ಸಂಘ ಒತ್ತಾಯಿಸಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…