ಮೈಸೂರು: ಕೇಂದ್ರ ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ಒದಗಿಸಿದ್ದರೂ ಜೀವನದ ಅಂಚಿನಲ್ಲಿರುವ ‘ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದ ಟಿಕೆಟ್ನಲ್ಲಿ ಹಿಂದೆ ಇದ್ದ ರಿಯಾಯಿತಿಯನ್ನು ಘೋಷಿಸಿಲ್ಲ. ಹಿರಿಯ ನಾಗರಿಕರಿಗೆ, ರೈಲ್ವೆ ಟಿಕೆಟ್ ರಿಯಾಯಿತಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷ ಬಿ.ಆರ್.ಉಮಾಕಾಂತ್ ಮನವಿ ಮಾಡಿದ್ದಾರೆ.
ಬಹಳ ವರ್ಷಗಳಿಂದಲೂ ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದಲ್ಲಿ ರಿಯಾಯಿತಿ ಇತ್ತು, ಕರೊನಾ ಸಂದರ್ಭದಲ್ಲಿ ರಿಯಾಯಿತಿ ಸ್ಥಗಿತಗೊಳಿಸಲಾಗಿತ್ತು. ಈಗ ರೈಲುಗಳ ಓಡಾಟ, ಜನಸಂದಣಿ ಎಲ್ಲಾ ಮೊದಲಿನಂತೆೆಯೇ ಇದೆ, ಆದರೂ ಹಿಂದೆ ಇದ್ದ ಪ್ರಮುಖವಾದ ರೈಲ್ವೆ ಟಿಕೆಟ್ನಲ್ಲಿ ರಿಯಾಯಿತಿಯ ಮೂಲಭೂತ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ಇನ್ನಾದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್ ರಿಯಾಯಿತಿಯನ್ನು ಪುನಾ ಘೊಷಿಸಬೇಕೆಂದು ಮೈಸೂರು ಜಿಲ್ಲಾ ಘಟಕದ ಹಿರಿಯ ನಾಗರಿಕರ ಸಂಘ ಒತ್ತಾಯಿಸಿದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…