ಮಡಿಕೇರಿ: ಮಡಿಕೇರಿಯ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚೆನ್ನೈನ ಟ್ರೇಡ್ ಸೆಂಟರ್ನಲ್ಲಿ ಎರಡು ದಿನಗಳ ಕಾಲ ನಡೆದ ಬ್ರೈನೋಬ್ರೈನ್ ಫೆಸ್ಟ್-೨೦೨೨, ೪೦ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ
ಕೇವಲ ೩ ನಿಮಿಷ ಸಮಯದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ ೭ ಚಾಂಪಿಯನ್ ಟ್ರೋಫಿ, ೩ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
೧೦ ಮಂದಿಗಳು ಪ್ರಶಸ್ತಿ ಪಡೆದುಕೊಂಡಿದ್ದಲ್ಲದೆ ಮಡಿಕೇರಿ ತರಬೇತಿ ಕೇಂದ್ರವು ಬೆಸ್ಟ್ ಫ್ಯಾಕಲ್ಟಿ ಅವಾರ್ಡ್ ಹಾಗೂ ಬೆಸ್ಟ್ ಫ್ರಾಂಚೈಸಿ ಅವಾರ್ಡ್ ಅನ್ನು ಪಡೆದುಕೊಂಡಿತು. ಬ್ರೈನೋಬ್ರೈನ್ ಇಂಟರ್ನ್ಯಾಷನಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಟ್ರೋಫಿ ಮತ್ತು ಪದಕಗಳನ್ನು ವಿತರಿಸಿದರು. ಪ್ರಾದೇಶಿಕ ನಿರ್ದೇಶಕ ನೀಲ್ ಕಮಲ್, ಚೇತಸ್, ನುಷ್ಕ ಕೊಡೆಂದರ, ಧ್ರುತಿ ಜೆ.ಪೂಜಾರಿ, ಎನ್.ಕೆ. ಚಹನ, ನಾಪಂಡ ನೀಶ ಪೂವಣ್ಣ, ಪ್ರತ್ಯೂಶ ಎಂ.ಸುವರ್ಣ, ಮೀನಾಕ್ಷಿ ಡಿ.ಎಂ ಚಾಂಪಿಯನ್ ಟ್ರೋಫಿ ಪಡೆದರೆ, ಎನ್.ನಿರನ್ ಪೂವಣ್ಣ, ಲಿಕಿತ್ ಜಿ.ವಿ, ಕುನಾಲ್ ಪ್ರಸಾದ್ ಡಬ್ಲ್ಯೂ.ವಿ ಚಿನ್ನದ ಪದಕ ಪಡೆದಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…