ಜಿಲ್ಲೆಗಳು

ತನಿಖೆಗೆ ಮನೆಗಳ ಆಯ್ಕೆ ವಿಚಾರ; ಹಲವರಲ್ಲಿ ನಡುಕ

ಕೋಟೆ: ಮಳೆ ಹಾನಿಗೊಳಗಾದ ಮನೆಗಳ ಆಯ್ಕೆಯ ಅವ್ಯವಹಾರ ಪತ್ತೆಗೆ ಉನ್ನತ ಮಟ್ಟದ ತನಿಖೆ ಶುರು

ಮಂಜು ಕೋಟೆ
ಹೆಚ್.ಡಿ.ಕೋಟೆ: ಕ್ಷೇತ್ರದಲ್ಲಿ ಮಳೆ ಹಾನಿಗೆ ಒಳಗಾಗಿರುವ ಮನೆಗಳ ಆಯ್ಕೆಯಲ್ಲಿ ಅಧಿಕಾರಿಗಳು ನೌಕರರು ಹಾಗೂ ಕೆಲ ಮುಖಂಡರು ನಡೆಸಿರುವ ವ್ಯವಹಾರವನ್ನು ಪತ್ತೆ ಹಚ್ಚಲು ಉನ್ನತ ಮಟ್ಟದ ಅಧಿಕಾರಿಗಳ ಮೂಲಕ ತನಿಖೆ ಪ್ರಾರಂಭಗೊಂಡಿರುವುದರಿಂದ ಅನೇಕರಲ್ಲಿ ನಡುಕ ಉಂಟಾಗಿದೆ.
ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದಾಗಿ ಸಾವಿರಾರು ಮನೆಗಳು ಹಾನಿಯಾಗಿವೆ ಎಂದು ಪೈಪೋಟಿಯ ಮೂಲಕ ಗ್ರಾಮ ಲೆಕ್ಕಿಗರು, ಕಂದಾಯ ಅಧಿಕಾರಿಗಳು, ತಹಸಿಲ್ದಾರ್, ಜಿಲ್ಲಾ ಪಂಚಾಯಿತಿ ಇಂಜಿನಿಯರ್, ಕೆಲ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಮೂರೂವರೆ ಲಕ್ಷ ಮತ್ತು ೫ ಲಕ್ಷ ರೂ. ವೆಚ್ಚದ ಮನೆಗಳ ಆಯ್ಕೆಗೆ ಸರಗೂರು ತಾಲ್ಲೂಕಿನಲ್ಲಿ ೧೫೬೮ ಮತ್ತು ಕೋಟೆ ತಾಲ್ಲೂಕಿನಲ್ಲಿ ೮೪೦ ಮನೆಗಳನ್ನು ಆ್ಂಕೆು ಮಾಡಿಸಲಾಗಿತ್ತು. ಮುಂದುವರಿದ ಭಾಗವಾಗಿ ಕ್ಷೇತ್ರದಲ್ಲಿ ಮತ್ತೆ ೯೨೪ ಅರ್ಜಿಗಳು ಬಂದಿವೆ.
ಅರ್ಹ ಫಲಾನುಭವಿಗಳು ಬಿದ್ದಿರುವ ನಮ್ಮ ಮನೆಗಳನ್ನು ಆ್ಂಕೆು ಮಾಡುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ. ನಾವುಗಳು ಬೀದಿಪಾಲಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮತ್ತು ಶಾಸಕರಾದ ಅನಿಲ್ ಚಿಕ್ಕಮಾದು ಸೇರಿದಂತೆ ಇನ್ನೂ ಅನೇಕ ಪ್ರಮುಖರಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರು. ಶಾಸಕರು ಸಹ ಈ ವಿಚಾರವಾಗಿ ಅನೇಕ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು.
ಅನೇಕ ರೈತ ಮುಖಂಡರು, ಬಡಜನರು, ಅರ್ಹ ಫಲಾನುಭವಿಗಳು ಅಧಿಕಾರಿಗಳ ನಡವಳಿಕೆಯಿಂದ ಬೇಸರಗೊಂಡು, ತಾಲ್ಲೂಕು ಕಚೇರಿಯಲ್ಲಿ ತಹಸಿಲ್ದಾರ್ ರತ್ನಾಂಬಿಕ ಅವರ ಜತೆ ಮಾತಿನ ಚಕಮಕಿ, ಗಲಾಟೆ ನಡೆಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಸರಗೂರು ತಾಲ್ಲೂಕಿನಿಂದ ರತ್ನಾಂಬಿಕೆಯವರನ್ನು ವರ್ಗಾಯಿಸಿ ನಂಜನಗೂಡಿನ ಶಿವಮೂರ್ತಿ ಎಂಬ ತಹಸಿಲ್ದಾರರನ್ನು ನೇಮಕ ಮಾಡಿ, ಜಿಪಂ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನಿಂಗರಾಜ್ ಅವರನ್ನು ಬದಲಾಯಿಸಿ ಸರಗೂರು ತಾಲ್ಲೂಕಿನಲ್ಲಿ ಆಯ್ಕೆ ಮಾಡಲಾಗಿರುವ ಪ್ರತಿಯೊಬ್ಬರ ಮನೆಗಳ ಸ್ಥಿತಿಗತಿ ಮತ್ತು ವರದಿಯನ್ನು ಪರಿಶೀಲಿಸಲು ೩ ತಂಡಗಳನ್ನು ನೇಮಿಸಿ ವಿವಿಧ ಭಾಗದ ೩ ತಹಸಿಲ್ದಾರ್,ಮುಡಾ ಇಂಜಿನಿಯರ್ ಗಳು ಹಾಗೂ ಪೊಲೀಸರಿಗೆ ಉಸ್ತುವಾರಿ ನೀಡಿದ್ದಾರೆ.
ಅಧಿಕಾರಿಗಳ ತಂಡ ಕಾರ್ಯಾಚರಣೆಯನ್ನು ಪ್ರಾರಂಭಿಸಿರುವುದರಿಂದ ಅನೇಕ ಅಧಿಕಾರಿಗಳು ಮತ್ತು ನೌಕರರು, ಕೆಲ ಮುಖಂಡರು ಸುಳ್ಳು ದಾಖಲಾತಿ ನೀಡಿ ಮನೆ ಮಾಡಿಸಿಕೊಂಡಿರುವವರಲ್ಲಿ ಆತಂಕ ಎದುರಾಗಿದೆ. ಅರ್ಹ ಫಲಾನುಭವಿಗಳು ಈಗಲಾದರೂ ನಮಗೆ ಮನೆಯನ್ನು ಕೊಡಿಸುವಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಮುಂದಾಗಿ ಕೆಲಸ ನಿರ್ಮಿಸುತ್ತಾರೆ ಎಂಬ ಆಶಾಭಾವನೆಯನ್ನು ಹೊಂದಿದ್ದಾರೆ


ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಸರಗೂರಿನಲ್ಲಿ ಕೆಲಸ ನಿರ್ವಹಿಸಲು ನನ್ನನ್ನು ನೇಮಕ ಮಾಡಿದ್ದು ೩ ತಂಡಗಳು ಪರಿಶೀಲನೆ ಕಾರ್ಯದಲ್ಲಿ ತೊಡಗಿವೆ. ವರದಿ ನೀಡಿದ ನಂತರ ಅವ್ಯವಹಾರ ಮಾಡಿರುವ ಅಧಿಕಾರಿಗಳು, ನೌಕರರು, ಫಲಾನುಭವಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು.
ಶಿವಮೂರ್ತಿ, ತಹಸಿಲ್ದಾರ್, ಸರಗೂರು ತಾ.ತಾ


ತಾಲ್ಲೂಕಿನಲ್ಲಿ ಮನೆಗಳ ಅಯ್ಕೆ ವಿಚಾರದಲ್ಲಿ ಅನೇಕ ಸಮಸ್ಯೆಗಳು ಎದುರಾಗಲಿವೆ. ಅನೇಕರ ಒತ್ತಡಕ್ಕೆ ಮಣಿಯಬೇಕಾಗುತ್ತದೆ ಎಂದು ತಹಸಿಲ್ದಾರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಚೆಲುವರಾಜು ಅವರು ೧ ತಿಂಗಳ ಹಿಂದೆ ಒಂದೂವರೆ ತಿಂಗಳ ಕಾಲ ರಜೆ ಹಾಕಿ ತೆರಳಿದ್ದಾರೆ. ಕೋಟೆ ತಾಲ್ಲೂಕಿನಲ್ಲೂ ಮನೆಗಳ ಆಯ್ಕೆಯ ಪರಿಶೀಲನೆ ತಂಡದ ಮೂಲಕ ನಡೆದಾಗ ಇಲ್ಲಿನ ಕರ್ಮಕಾಂಡವು ಬಯಲಿಗೆ ಬರಲಿದೆ.

ಶ್ರೀನಿವಾಸ್ ಎಚ್ ಡಿ ಕೋಟೆ

andolanait

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

10 hours ago