ಜಿಲ್ಲೆಗಳು

ಹೂಡಿಕೆ ಹೆಸರಲ್ಲಿ ಮೋಸ ಹೋಗಿದ್ದೀರಾ ? ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿ

ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು ಸೂಕ್ತ ದಾಖಲಾತಿಗಳೊಂದಿಗೆ ನಗರದ ಸೆನ್ ಕ್ರೈಂ ಪೊಲೀಸರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಟ್ಟಗಳ್ಳಿಯ ಸೋಮನಾಥನಗರದ ವಿಶ್ವಮಾನವ ಜೋಡಿರಸ್ತೆಯ ಆದಿತ್ಯ ಸರ್ಕಲ್ ಬಳಿ ಇರುವ ಜಿ.ಎನ್.ಕೃಷ್ಣಮೂರ್ತಿ ಹಾಗೂ ಆತನ ಪತ್ನಿ ಡಯಾನ ಎಂಬವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶವನ್ನು ನೀಡುವುದಾಗಿ ತಿಳಿಸಿ ೨೦೧೪ರಿಂದ ೨೦೨೧ರವರೆಗೆ ಜನರಿಂದ ಒಟ್ಟು ೨,೧೪,೮೪,೫೦೦ ರೂ. ಹೂಡಿಕೆ ಮಾಡಿಸಿ, ಲಾಂಭಾಂಶವನ್ನು ನೀಡದೆ, ಹೂಡಿಕೆ ಹಣವನ್ನೂ ವಾಪಸ್ ನೀಡದೆ ಮೋಸ ಮಾಡಿರುವ ಬಗ್ಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಜಿ.ಎನ್.ಕೃಷ್ಣಮೂರ್ತಿ ಅವರನ್ನು ಅ.೧೩ರಂದು ಬಂಧಿಸಿ ವಿಚಾರಣೆ ಮಾಡಲಾಗಿ ಈತ ಇತರೆ ಆರೋಪಿಗಳಾದ ಲಕ್ಷ್ಮೀಶ ಹಾಗೂ ರಘುಕುಮಾರ್ ಎಂಬವರ ಜತೆ ಸೇರಿಕೊಂಡು ಹಿಮಾಲಯ ಕಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಕಂಪೆನಿಗಳನ್ನು ವಿವಿಧ ಸ್ಥಳಗಳಲ್ಲಿ ತೆರೆದು ಈ ಕಂಪೆನಿಗಳ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುವುದು ತಿಳಿದು ಬಂದಿರುತ್ತದೆ. ಆದ್ದರಿಂದ ಮೇಲ್ಕಂಡ ವ್ಯಕ್ತಿಗಳು ಮತ್ತು ಕಂಪೆನಿಗಳ ಮೇಲೆ ಹಣ ಹೂಡಿಕೆ ಮಾಡಿ ಮೋಸ ಹೋಗಿರುವ ಸಾರ್ವಜನಿಕರು ಅವಶ್ಯ ದಾಖಲಾತಿಗಳೊಂದಿಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವರನ್ನು ಸಂಪರ್ಕಿಸಲು ತಿಳಿಸಿದೆ.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

53 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago