ಜಿಲ್ಲೆಗಳು

ಹೂಡಿಕೆ ಹೆಸರಲ್ಲಿ ಮೋಸ ಹೋಗಿದ್ದೀರಾ ? ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿ

ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು ಸೂಕ್ತ ದಾಖಲಾತಿಗಳೊಂದಿಗೆ ನಗರದ ಸೆನ್ ಕ್ರೈಂ ಪೊಲೀಸರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಟ್ಟಗಳ್ಳಿಯ ಸೋಮನಾಥನಗರದ ವಿಶ್ವಮಾನವ ಜೋಡಿರಸ್ತೆಯ ಆದಿತ್ಯ ಸರ್ಕಲ್ ಬಳಿ ಇರುವ ಜಿ.ಎನ್.ಕೃಷ್ಣಮೂರ್ತಿ ಹಾಗೂ ಆತನ ಪತ್ನಿ ಡಯಾನ ಎಂಬವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶವನ್ನು ನೀಡುವುದಾಗಿ ತಿಳಿಸಿ ೨೦೧೪ರಿಂದ ೨೦೨೧ರವರೆಗೆ ಜನರಿಂದ ಒಟ್ಟು ೨,೧೪,೮೪,೫೦೦ ರೂ. ಹೂಡಿಕೆ ಮಾಡಿಸಿ, ಲಾಂಭಾಂಶವನ್ನು ನೀಡದೆ, ಹೂಡಿಕೆ ಹಣವನ್ನೂ ವಾಪಸ್ ನೀಡದೆ ಮೋಸ ಮಾಡಿರುವ ಬಗ್ಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಜಿ.ಎನ್.ಕೃಷ್ಣಮೂರ್ತಿ ಅವರನ್ನು ಅ.೧೩ರಂದು ಬಂಧಿಸಿ ವಿಚಾರಣೆ ಮಾಡಲಾಗಿ ಈತ ಇತರೆ ಆರೋಪಿಗಳಾದ ಲಕ್ಷ್ಮೀಶ ಹಾಗೂ ರಘುಕುಮಾರ್ ಎಂಬವರ ಜತೆ ಸೇರಿಕೊಂಡು ಹಿಮಾಲಯ ಕಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಕಂಪೆನಿಗಳನ್ನು ವಿವಿಧ ಸ್ಥಳಗಳಲ್ಲಿ ತೆರೆದು ಈ ಕಂಪೆನಿಗಳ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುವುದು ತಿಳಿದು ಬಂದಿರುತ್ತದೆ. ಆದ್ದರಿಂದ ಮೇಲ್ಕಂಡ ವ್ಯಕ್ತಿಗಳು ಮತ್ತು ಕಂಪೆನಿಗಳ ಮೇಲೆ ಹಣ ಹೂಡಿಕೆ ಮಾಡಿ ಮೋಸ ಹೋಗಿರುವ ಸಾರ್ವಜನಿಕರು ಅವಶ್ಯ ದಾಖಲಾತಿಗಳೊಂದಿಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವರನ್ನು ಸಂಪರ್ಕಿಸಲು ತಿಳಿಸಿದೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

8 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

10 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

11 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

11 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

12 hours ago