ಜಿಲ್ಲೆಗಳು

ಹೂಡಿಕೆ ಹೆಸರಲ್ಲಿ ಮೋಸ ಹೋಗಿದ್ದೀರಾ ? ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿ

ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು ಸೂಕ್ತ ದಾಖಲಾತಿಗಳೊಂದಿಗೆ ನಗರದ ಸೆನ್ ಕ್ರೈಂ ಪೊಲೀಸರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಟ್ಟಗಳ್ಳಿಯ ಸೋಮನಾಥನಗರದ ವಿಶ್ವಮಾನವ ಜೋಡಿರಸ್ತೆಯ ಆದಿತ್ಯ ಸರ್ಕಲ್ ಬಳಿ ಇರುವ ಜಿ.ಎನ್.ಕೃಷ್ಣಮೂರ್ತಿ ಹಾಗೂ ಆತನ ಪತ್ನಿ ಡಯಾನ ಎಂಬವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶವನ್ನು ನೀಡುವುದಾಗಿ ತಿಳಿಸಿ ೨೦೧೪ರಿಂದ ೨೦೨೧ರವರೆಗೆ ಜನರಿಂದ ಒಟ್ಟು ೨,೧೪,೮೪,೫೦೦ ರೂ. ಹೂಡಿಕೆ ಮಾಡಿಸಿ, ಲಾಂಭಾಂಶವನ್ನು ನೀಡದೆ, ಹೂಡಿಕೆ ಹಣವನ್ನೂ ವಾಪಸ್ ನೀಡದೆ ಮೋಸ ಮಾಡಿರುವ ಬಗ್ಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಜಿ.ಎನ್.ಕೃಷ್ಣಮೂರ್ತಿ ಅವರನ್ನು ಅ.೧೩ರಂದು ಬಂಧಿಸಿ ವಿಚಾರಣೆ ಮಾಡಲಾಗಿ ಈತ ಇತರೆ ಆರೋಪಿಗಳಾದ ಲಕ್ಷ್ಮೀಶ ಹಾಗೂ ರಘುಕುಮಾರ್ ಎಂಬವರ ಜತೆ ಸೇರಿಕೊಂಡು ಹಿಮಾಲಯ ಕಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಕಂಪೆನಿಗಳನ್ನು ವಿವಿಧ ಸ್ಥಳಗಳಲ್ಲಿ ತೆರೆದು ಈ ಕಂಪೆನಿಗಳ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುವುದು ತಿಳಿದು ಬಂದಿರುತ್ತದೆ. ಆದ್ದರಿಂದ ಮೇಲ್ಕಂಡ ವ್ಯಕ್ತಿಗಳು ಮತ್ತು ಕಂಪೆನಿಗಳ ಮೇಲೆ ಹಣ ಹೂಡಿಕೆ ಮಾಡಿ ಮೋಸ ಹೋಗಿರುವ ಸಾರ್ವಜನಿಕರು ಅವಶ್ಯ ದಾಖಲಾತಿಗಳೊಂದಿಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವರನ್ನು ಸಂಪರ್ಕಿಸಲು ತಿಳಿಸಿದೆ.

andolanait

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

12 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

17 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago