ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು ಸೂಕ್ತ ದಾಖಲಾತಿಗಳೊಂದಿಗೆ ನಗರದ ಸೆನ್ ಕ್ರೈಂ ಪೊಲೀಸರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಟ್ಟಗಳ್ಳಿಯ ಸೋಮನಾಥನಗರದ ವಿಶ್ವಮಾನವ ಜೋಡಿರಸ್ತೆಯ ಆದಿತ್ಯ ಸರ್ಕಲ್ ಬಳಿ ಇರುವ ಜಿ.ಎನ್.ಕೃಷ್ಣಮೂರ್ತಿ ಹಾಗೂ ಆತನ ಪತ್ನಿ ಡಯಾನ ಎಂಬವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶವನ್ನು ನೀಡುವುದಾಗಿ ತಿಳಿಸಿ ೨೦೧೪ರಿಂದ ೨೦೨೧ರವರೆಗೆ ಜನರಿಂದ ಒಟ್ಟು ೨,೧೪,೮೪,೫೦೦ ರೂ. ಹೂಡಿಕೆ ಮಾಡಿಸಿ, ಲಾಂಭಾಂಶವನ್ನು ನೀಡದೆ, ಹೂಡಿಕೆ ಹಣವನ್ನೂ ವಾಪಸ್ ನೀಡದೆ ಮೋಸ ಮಾಡಿರುವ ಬಗ್ಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಜಿ.ಎನ್.ಕೃಷ್ಣಮೂರ್ತಿ ಅವರನ್ನು ಅ.೧೩ರಂದು ಬಂಧಿಸಿ ವಿಚಾರಣೆ ಮಾಡಲಾಗಿ ಈತ ಇತರೆ ಆರೋಪಿಗಳಾದ ಲಕ್ಷ್ಮೀಶ ಹಾಗೂ ರಘುಕುಮಾರ್ ಎಂಬವರ ಜತೆ ಸೇರಿಕೊಂಡು ಹಿಮಾಲಯ ಕಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಕಂಪೆನಿಗಳನ್ನು ವಿವಿಧ ಸ್ಥಳಗಳಲ್ಲಿ ತೆರೆದು ಈ ಕಂಪೆನಿಗಳ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುವುದು ತಿಳಿದು ಬಂದಿರುತ್ತದೆ. ಆದ್ದರಿಂದ ಮೇಲ್ಕಂಡ ವ್ಯಕ್ತಿಗಳು ಮತ್ತು ಕಂಪೆನಿಗಳ ಮೇಲೆ ಹಣ ಹೂಡಿಕೆ ಮಾಡಿ ಮೋಸ ಹೋಗಿರುವ ಸಾರ್ವಜನಿಕರು ಅವಶ್ಯ ದಾಖಲಾತಿಗಳೊಂದಿಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವರನ್ನು ಸಂಪರ್ಕಿಸಲು ತಿಳಿಸಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…