ಜಿಲ್ಲೆಗಳು

ಹೂಡಿಕೆ ಹೆಸರಲ್ಲಿ ಮೋಸ ಹೋಗಿದ್ದೀರಾ ? ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿ

ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು ಸೂಕ್ತ ದಾಖಲಾತಿಗಳೊಂದಿಗೆ ನಗರದ ಸೆನ್ ಕ್ರೈಂ ಪೊಲೀಸರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಟ್ಟಗಳ್ಳಿಯ ಸೋಮನಾಥನಗರದ ವಿಶ್ವಮಾನವ ಜೋಡಿರಸ್ತೆಯ ಆದಿತ್ಯ ಸರ್ಕಲ್ ಬಳಿ ಇರುವ ಜಿ.ಎನ್.ಕೃಷ್ಣಮೂರ್ತಿ ಹಾಗೂ ಆತನ ಪತ್ನಿ ಡಯಾನ ಎಂಬವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶವನ್ನು ನೀಡುವುದಾಗಿ ತಿಳಿಸಿ ೨೦೧೪ರಿಂದ ೨೦೨೧ರವರೆಗೆ ಜನರಿಂದ ಒಟ್ಟು ೨,೧೪,೮೪,೫೦೦ ರೂ. ಹೂಡಿಕೆ ಮಾಡಿಸಿ, ಲಾಂಭಾಂಶವನ್ನು ನೀಡದೆ, ಹೂಡಿಕೆ ಹಣವನ್ನೂ ವಾಪಸ್ ನೀಡದೆ ಮೋಸ ಮಾಡಿರುವ ಬಗ್ಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಜಿ.ಎನ್.ಕೃಷ್ಣಮೂರ್ತಿ ಅವರನ್ನು ಅ.೧೩ರಂದು ಬಂಧಿಸಿ ವಿಚಾರಣೆ ಮಾಡಲಾಗಿ ಈತ ಇತರೆ ಆರೋಪಿಗಳಾದ ಲಕ್ಷ್ಮೀಶ ಹಾಗೂ ರಘುಕುಮಾರ್ ಎಂಬವರ ಜತೆ ಸೇರಿಕೊಂಡು ಹಿಮಾಲಯ ಕಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಕಂಪೆನಿಗಳನ್ನು ವಿವಿಧ ಸ್ಥಳಗಳಲ್ಲಿ ತೆರೆದು ಈ ಕಂಪೆನಿಗಳ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುವುದು ತಿಳಿದು ಬಂದಿರುತ್ತದೆ. ಆದ್ದರಿಂದ ಮೇಲ್ಕಂಡ ವ್ಯಕ್ತಿಗಳು ಮತ್ತು ಕಂಪೆನಿಗಳ ಮೇಲೆ ಹಣ ಹೂಡಿಕೆ ಮಾಡಿ ಮೋಸ ಹೋಗಿರುವ ಸಾರ್ವಜನಿಕರು ಅವಶ್ಯ ದಾಖಲಾತಿಗಳೊಂದಿಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವರನ್ನು ಸಂಪರ್ಕಿಸಲು ತಿಳಿಸಿದೆ.

andolanait

Recent Posts

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

13 mins ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

44 mins ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

56 mins ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

2 hours ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

2 hours ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

3 hours ago