ಜಿಲ್ಲೆಗಳು

ಕನ್ನಡ ಅಕ್ಷರ ಜಾತ್ರೆಗೆ ಕವನಗಳ ಆಹ್ವಾನ

ಮಂಡ್ಯ; ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ, ಕನ್ನಂಬಾಡಿ ಹಾಗೂ ಕಾವೇರಿ ಪ್ರಭ ದಿನಪತ್ರಿಕೆಯ ಸಹಯೋಗದಲ್ಲಿ ಚಂದ್ರಮಾನ ಯುಗಾದಿ ಸಂಭ್ರಮದ ಅಂಗವಾಗಿ ಕನ್ನಡ ಅಕ್ಷರ ಜಾತ್ರೆ ಸಾಹಿತ್ಯ ಸಮ್ಮೇಳನವನ್ನು ಮಾ.19 ರಂದು ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದೆ. ಆಸಕ್ತರಿಂದ ಕವಿಗೋಷ್ಠಿಗೆ ಕವನವನ್ನು ಆಹ್ವಾನಿಸಿದೆ.
ಆಸಕ್ತರು 20 ಸಾಲಿನ ಎರಡು ಕವನಗಳು, ಕಿರು ಪರಿಚಯ, ಫೋಟೋ, ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಫೆ.15ರೊಳಗೆ ಕಳುಹಿಸಬೇಕು. ವ್ಯಾಟ್ಸಾಪ್‌ನಲ್ಲಿ ಮೊದಲು ನೋಂದಣಿ ಮಾಡಿಕೊಂಡು, ನಂತರ ಅಂಚೆ ಮೂಲಕ ಕಳುಹಿಸಬೇಕು.
ಕವನಗಳು ಕನ್ನಡ ನಾಡು-ನುಡಿ, ಜಲ-ಸಂಪನ್ಮೂಲ, ಪರಿಸರ, ತಾಯಿ, ಚಂದ್ರಮಾನ ಯುಗಾದಿ ವಿಷಯವನ್ನು ಒಳಗೊಂಡಿರಬೇಕು. ಆಯ್ಕೆಯಾದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು. 50 ಮಂದಿ ಕವಿಗಳಿಗೆ ಕವಿಗೋಷ್ಠಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಹತ್ತು ಮಂದಿ ಉತ್ತಮ ಕವನಗಳಿಗೆ ರಾಜ್ಯ ಮಟ್ಟದ ‘ಕಾವ್ಯಶ್ರೀ’, ಇಪ್ಪತ್ತು ಮಂದಿ ಸಾಧಕರಿಗೆ ‘ಕನ್ನಡರತ್ನ’, ಹತ್ತು ಮಂದಿ ಸಾಧಕರಿಗೆ ‘ಯುಗಾದಿ ಪುರಸ್ಕಾರ’ ಹಾಗೂ ಹತ್ತು ಮಂದಿಗೆ ಜೀವಮಾನದಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ಕರ್ನಾಟಕ ಸೇವಾ ರತ್ನರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು.
ಕವಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ವಿವಿಧ ಪ್ರಶಸ್ತಿ ಹಾಗೂ ಕವಿಗೋಷ್ಠಿಗೆ ಫೆ.15ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ವ್ಯಾಟ್ಸಾಪ್ ನಂ. 9448424380 ಗೆ ಕಳುಹಿಸಬೇಕಾಗಿ ಕೃಷ್ಣ ಸ್ವರ್ಣಸಂದ್ರ ಕೋರಿದ್ದಾರೆ.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

7 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

7 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

8 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

9 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

9 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

9 hours ago