ಮಂಡ್ಯ; ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ, ಕನ್ನಂಬಾಡಿ ಹಾಗೂ ಕಾವೇರಿ ಪ್ರಭ ದಿನಪತ್ರಿಕೆಯ ಸಹಯೋಗದಲ್ಲಿ ಚಂದ್ರಮಾನ ಯುಗಾದಿ ಸಂಭ್ರಮದ ಅಂಗವಾಗಿ ಕನ್ನಡ ಅಕ್ಷರ ಜಾತ್ರೆ ಸಾಹಿತ್ಯ ಸಮ್ಮೇಳನವನ್ನು ಮಾ.19 ರಂದು ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದೆ. ಆಸಕ್ತರಿಂದ ಕವಿಗೋಷ್ಠಿಗೆ ಕವನವನ್ನು ಆಹ್ವಾನಿಸಿದೆ.
ಆಸಕ್ತರು 20 ಸಾಲಿನ ಎರಡು ಕವನಗಳು, ಕಿರು ಪರಿಚಯ, ಫೋಟೋ, ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಫೆ.15ರೊಳಗೆ ಕಳುಹಿಸಬೇಕು. ವ್ಯಾಟ್ಸಾಪ್ನಲ್ಲಿ ಮೊದಲು ನೋಂದಣಿ ಮಾಡಿಕೊಂಡು, ನಂತರ ಅಂಚೆ ಮೂಲಕ ಕಳುಹಿಸಬೇಕು.
ಕವನಗಳು ಕನ್ನಡ ನಾಡು-ನುಡಿ, ಜಲ-ಸಂಪನ್ಮೂಲ, ಪರಿಸರ, ತಾಯಿ, ಚಂದ್ರಮಾನ ಯುಗಾದಿ ವಿಷಯವನ್ನು ಒಳಗೊಂಡಿರಬೇಕು. ಆಯ್ಕೆಯಾದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು. 50 ಮಂದಿ ಕವಿಗಳಿಗೆ ಕವಿಗೋಷ್ಠಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಹತ್ತು ಮಂದಿ ಉತ್ತಮ ಕವನಗಳಿಗೆ ರಾಜ್ಯ ಮಟ್ಟದ ‘ಕಾವ್ಯಶ್ರೀ’, ಇಪ್ಪತ್ತು ಮಂದಿ ಸಾಧಕರಿಗೆ ‘ಕನ್ನಡರತ್ನ’, ಹತ್ತು ಮಂದಿ ಸಾಧಕರಿಗೆ ‘ಯುಗಾದಿ ಪುರಸ್ಕಾರ’ ಹಾಗೂ ಹತ್ತು ಮಂದಿಗೆ ಜೀವಮಾನದಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ಕರ್ನಾಟಕ ಸೇವಾ ರತ್ನರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು.
ಕವಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ವಿವಿಧ ಪ್ರಶಸ್ತಿ ಹಾಗೂ ಕವಿಗೋಷ್ಠಿಗೆ ಫೆ.15ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ವ್ಯಾಟ್ಸಾಪ್ ನಂ. 9448424380 ಗೆ ಕಳುಹಿಸಬೇಕಾಗಿ ಕೃಷ್ಣ ಸ್ವರ್ಣಸಂದ್ರ ಕೋರಿದ್ದಾರೆ.
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…