ಜಿಲ್ಲೆಗಳು

ಕನ್ನಡ ಅಕ್ಷರ ಜಾತ್ರೆಗೆ ಕವನಗಳ ಆಹ್ವಾನ

ಮಂಡ್ಯ; ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ, ಕನ್ನಂಬಾಡಿ ಹಾಗೂ ಕಾವೇರಿ ಪ್ರಭ ದಿನಪತ್ರಿಕೆಯ ಸಹಯೋಗದಲ್ಲಿ ಚಂದ್ರಮಾನ ಯುಗಾದಿ ಸಂಭ್ರಮದ ಅಂಗವಾಗಿ ಕನ್ನಡ ಅಕ್ಷರ ಜಾತ್ರೆ ಸಾಹಿತ್ಯ ಸಮ್ಮೇಳನವನ್ನು ಮಾ.19 ರಂದು ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದೆ. ಆಸಕ್ತರಿಂದ ಕವಿಗೋಷ್ಠಿಗೆ ಕವನವನ್ನು ಆಹ್ವಾನಿಸಿದೆ.
ಆಸಕ್ತರು 20 ಸಾಲಿನ ಎರಡು ಕವನಗಳು, ಕಿರು ಪರಿಚಯ, ಫೋಟೋ, ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಫೆ.15ರೊಳಗೆ ಕಳುಹಿಸಬೇಕು. ವ್ಯಾಟ್ಸಾಪ್‌ನಲ್ಲಿ ಮೊದಲು ನೋಂದಣಿ ಮಾಡಿಕೊಂಡು, ನಂತರ ಅಂಚೆ ಮೂಲಕ ಕಳುಹಿಸಬೇಕು.
ಕವನಗಳು ಕನ್ನಡ ನಾಡು-ನುಡಿ, ಜಲ-ಸಂಪನ್ಮೂಲ, ಪರಿಸರ, ತಾಯಿ, ಚಂದ್ರಮಾನ ಯುಗಾದಿ ವಿಷಯವನ್ನು ಒಳಗೊಂಡಿರಬೇಕು. ಆಯ್ಕೆಯಾದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು. 50 ಮಂದಿ ಕವಿಗಳಿಗೆ ಕವಿಗೋಷ್ಠಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಹತ್ತು ಮಂದಿ ಉತ್ತಮ ಕವನಗಳಿಗೆ ರಾಜ್ಯ ಮಟ್ಟದ ‘ಕಾವ್ಯಶ್ರೀ’, ಇಪ್ಪತ್ತು ಮಂದಿ ಸಾಧಕರಿಗೆ ‘ಕನ್ನಡರತ್ನ’, ಹತ್ತು ಮಂದಿ ಸಾಧಕರಿಗೆ ‘ಯುಗಾದಿ ಪುರಸ್ಕಾರ’ ಹಾಗೂ ಹತ್ತು ಮಂದಿಗೆ ಜೀವಮಾನದಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ಕರ್ನಾಟಕ ಸೇವಾ ರತ್ನರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು.
ಕವಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ವಿವಿಧ ಪ್ರಶಸ್ತಿ ಹಾಗೂ ಕವಿಗೋಷ್ಠಿಗೆ ಫೆ.15ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ವ್ಯಾಟ್ಸಾಪ್ ನಂ. 9448424380 ಗೆ ಕಳುಹಿಸಬೇಕಾಗಿ ಕೃಷ್ಣ ಸ್ವರ್ಣಸಂದ್ರ ಕೋರಿದ್ದಾರೆ.

andolanait

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

8 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

8 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

13 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

15 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

17 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

17 hours ago