ಜಿಲ್ಲೆಗಳು

‘ಆತಿಥ್ಯ ನೀಡಿದ್ದಕ್ಕೆ ಮಠದ ಜಾಗ ನೀಡಿ ಎನ್ನುವುದು ಸರಿಯೇ?’

ಮೈಸೂರು: ಮೈಸೂರಿನಲ್ಲಿರುವ ನಿರಂಜನ ಮಠಕ್ಕೆ ಸೇರಿರುವ ಒಂದು ಚದರ ಅಡಿ ಜಾಗಕ್ಕೆ ಕುತ್ತು ಬಂದರೆ, ರಾಜ್ಯದ ೧ಲಕ್ಷದ ೯೨ ಸಾವಿರದ ೮೦೦ ಚದರ ಕಿ.ಮೀ. ಆಡಳಿತವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೃ ಶಂಕರ ಮಹದೇವ ಬಿದರಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ಶ್ರೀ ನಿರಂಜನ ಮಠ ಒಂದು ಅವಲೋಕನ-೨೦೨೨’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬೀದರಿನ ಬಸವಕಲ್ಯಾಣದಿಂದ ಒಂದು ಯಾತ್ರೆ, ಕೂಡಲಸಂಗಮದಿಂದ ಒಂದು ಯಾತ್ರೆ ಮತ್ತು ಉಳವಿಯಿಂದ ಒಂದು ಯಾತ್ರೆಯನ್ನು ಸಂಘಟನೆ ಮಾಡಿ ವೀರಶೈವ-ಲಿಂಗಾಯತರನ್ನು ಜಾಗೃತಿಗೊಳಿಸಲಾಗುತ್ತದೆ. ಈ ಹೋರಾಟ ಕೇವಲ ಕರ್ನಾಟಕದ ವ್ಯಾಪ್ತಿಗೆ ಮಾತ್ರ ಸೀಮಿತವಾಗಿದೇ ಇಡೀ ದೇಶದ ಹೋರಾಟವಾಗುತ್ತದೆ ಎಂದು ಅವರು ಗುಡುಗಿದರು.

ನಾವು ಈವರೆಗೂ ಯಾವ ಸಮಾಜದಿಂದಲೂ ಏನನ್ನೂ ಕಿತ್ತುಕೊಂಡಿಲ್ಲ. ನಮ್ಮಿಂದ ಸಾಕಷ್ಟನ್ನು ಕೊಟ್ಟಿದ್ದೇವೆ. ಆದರೂ ನಮ್ಮ ಅಸ್ತಿತ್ವ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ನಮಗೆ ಎಲ್ಲಾ ದಾರ್ಶನಿಕರ ಬಗ್ಗೆ ಗೌರವವಿದೆ. ಬಸವಣ್ಣ, ಅಲ್ಲಮ ಅವರಂತೆ ಕನಕದಾಸರು, ಪುರಂದರದಾಸರು, ವಿವೇಕಾನಂದರು, ರಾಮಕೃಷ್ಣ ಪರಮಹಂಸರು ಸೇರಿದಂತೆ ಎಲ್ಲರ ಬಗ್ಗೆಯೂ ಗೌರವವಿದೆ. ಆದರೆ ವಿವೇಕಾನಂದರಿಗೆ ನಿರಂಜನ ಮಠದಲ್ಲಿ ಆತಿಥ್ಯ ನೀಡಲಾಯಿತು ಎಂಬ ಕಾರಣಕ್ಕೆ ಮಠದ ಜಾಗವನ್ನೇ ಕೊಡಿ ಎಂದರೆ ಹೇಗೆ? ಎಂದು ಅವರು ಪ್ರಶ್ನಿಸಿದರು.

ನಮ್ಮ ಸಮಾಜದ ಸ್ವಾಮೀಜಿಗಳು ಪಶ್ಚಿಮಬಂಗಾಳದ ಬೇಲೂರು ಮಠಕ್ಕೆ ಹೋದ ಸಂದರ್ಭದಲ್ಲಿ ಅವರಿಗೆ ಆ ಮಠದವರು ಶಿಷ್ಠಾಚಾರದಂತೆ ಅತಿಥ್ಯ ನೀಡಿ, ಸತ್ಕಾರ ಮಾಡುತ್ತಾರೆ. ಅಂದ ಮಾತ್ರಕ್ಕೆ ನಮ್ಮ ಶ್ರೀಗಳ ಪ್ರತಿಮೆ ಹಾಕಿ, ಬಸವಣ್ಣನವರ ಪ್ರತಿಮೆ ಹಾಕಿ ಎನ್ನಲು ಸಾಧ್ಯವೇ? ಹಾಗೆೆುೀಂ ವಿವೇಕಾನಂದರು ಇಲ್ಲಿ ತಂಗಿದ್ದರು ಎಂಬ ಕಾರಣಕ್ಕೆ ಈಗ ಮಠವನ್ನೇ ಕೊಡಿ ಎನ್ನುವುದು ಅದು ವಿವೇಕ ರಹಿತ ಚಿಂತನೆ, ವಿವೇಕ ರಹಿತ ತೀರ್ಮಾನ ಎಂದು ಬಿದರಿ ಕಟುವಾಗಿ ಟೀಕಿಸಿದರು.

ಹೊಸಮಠದ ಚಿದಾನಂದಸ್ವಾಮೀಜಿ, ಕುದೇರು ಮಠದ ಗುರುಶಾಂತಸ್ವಾಮೀಜಿ ಉಪಸ್ಥಿತರಿದ್ದರು. ನಿರಂಜನ ಮಠ ಸಂರಕ್ಷಣಾ ಸಮಿತಿ ಅಧ್ಯಕ್ಷ ಎಚ್.ವಿ. ಬಸವರಾಜು ಹಿನಕಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ಸುನಂದಾ ಪಾಲನೇತ್ರ,ಮಹಾಸಭಾದ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಕೆ.ಎಸ್.ಮಹದೇವ ಪ್ರಸಾದ್, ನಗರ ಘಟಕದ ಅಧ್ಯಕ್ಷ ಎಂ.ಎಚ್.ಚಂದ್ರಶೇಖರ್, ಬಸವಬಳಗಗಳ ಅಧ್ಯಕ್ಷ ಎಲ್.ಎಸ್.ಮಹದೇವಸ್ವಾಮಿ, ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಕೆ.ನಾಗರಾಜು, ನಟರಾಜ, ಶಶಿಧರ ಶಾನಭಾಗ್, ಟಿ.ಎಸ್.ಲೋಕೇಶ್ ಮತ್ತಿತರರು ಹಾಜರಿದ್ದರು.

 

 

 

andolana

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

7 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

11 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

11 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

11 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

11 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

12 hours ago