ಜಿಲ್ಲೆಗಳು

‘ಆತಿಥ್ಯ ನೀಡಿದ್ದಕ್ಕೆ ಮಠದ ಜಾಗ ನೀಡಿ ಎನ್ನುವುದು ಸರಿಯೇ?’

ಮೈಸೂರು: ಮೈಸೂರಿನಲ್ಲಿರುವ ನಿರಂಜನ ಮಠಕ್ಕೆ ಸೇರಿರುವ ಒಂದು ಚದರ ಅಡಿ ಜಾಗಕ್ಕೆ ಕುತ್ತು ಬಂದರೆ, ರಾಜ್ಯದ ೧ಲಕ್ಷದ ೯೨ ಸಾವಿರದ ೮೦೦ ಚದರ ಕಿ.ಮೀ. ಆಡಳಿತವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೃ ಶಂಕರ ಮಹದೇವ ಬಿದರಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ಶ್ರೀ ನಿರಂಜನ ಮಠ ಒಂದು ಅವಲೋಕನ-೨೦೨೨’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬೀದರಿನ ಬಸವಕಲ್ಯಾಣದಿಂದ ಒಂದು ಯಾತ್ರೆ, ಕೂಡಲಸಂಗಮದಿಂದ ಒಂದು ಯಾತ್ರೆ ಮತ್ತು ಉಳವಿಯಿಂದ ಒಂದು ಯಾತ್ರೆಯನ್ನು ಸಂಘಟನೆ ಮಾಡಿ ವೀರಶೈವ-ಲಿಂಗಾಯತರನ್ನು ಜಾಗೃತಿಗೊಳಿಸಲಾಗುತ್ತದೆ. ಈ ಹೋರಾಟ ಕೇವಲ ಕರ್ನಾಟಕದ ವ್ಯಾಪ್ತಿಗೆ ಮಾತ್ರ ಸೀಮಿತವಾಗಿದೇ ಇಡೀ ದೇಶದ ಹೋರಾಟವಾಗುತ್ತದೆ ಎಂದು ಅವರು ಗುಡುಗಿದರು.

ನಾವು ಈವರೆಗೂ ಯಾವ ಸಮಾಜದಿಂದಲೂ ಏನನ್ನೂ ಕಿತ್ತುಕೊಂಡಿಲ್ಲ. ನಮ್ಮಿಂದ ಸಾಕಷ್ಟನ್ನು ಕೊಟ್ಟಿದ್ದೇವೆ. ಆದರೂ ನಮ್ಮ ಅಸ್ತಿತ್ವ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ನಮಗೆ ಎಲ್ಲಾ ದಾರ್ಶನಿಕರ ಬಗ್ಗೆ ಗೌರವವಿದೆ. ಬಸವಣ್ಣ, ಅಲ್ಲಮ ಅವರಂತೆ ಕನಕದಾಸರು, ಪುರಂದರದಾಸರು, ವಿವೇಕಾನಂದರು, ರಾಮಕೃಷ್ಣ ಪರಮಹಂಸರು ಸೇರಿದಂತೆ ಎಲ್ಲರ ಬಗ್ಗೆಯೂ ಗೌರವವಿದೆ. ಆದರೆ ವಿವೇಕಾನಂದರಿಗೆ ನಿರಂಜನ ಮಠದಲ್ಲಿ ಆತಿಥ್ಯ ನೀಡಲಾಯಿತು ಎಂಬ ಕಾರಣಕ್ಕೆ ಮಠದ ಜಾಗವನ್ನೇ ಕೊಡಿ ಎಂದರೆ ಹೇಗೆ? ಎಂದು ಅವರು ಪ್ರಶ್ನಿಸಿದರು.

ನಮ್ಮ ಸಮಾಜದ ಸ್ವಾಮೀಜಿಗಳು ಪಶ್ಚಿಮಬಂಗಾಳದ ಬೇಲೂರು ಮಠಕ್ಕೆ ಹೋದ ಸಂದರ್ಭದಲ್ಲಿ ಅವರಿಗೆ ಆ ಮಠದವರು ಶಿಷ್ಠಾಚಾರದಂತೆ ಅತಿಥ್ಯ ನೀಡಿ, ಸತ್ಕಾರ ಮಾಡುತ್ತಾರೆ. ಅಂದ ಮಾತ್ರಕ್ಕೆ ನಮ್ಮ ಶ್ರೀಗಳ ಪ್ರತಿಮೆ ಹಾಕಿ, ಬಸವಣ್ಣನವರ ಪ್ರತಿಮೆ ಹಾಕಿ ಎನ್ನಲು ಸಾಧ್ಯವೇ? ಹಾಗೆೆುೀಂ ವಿವೇಕಾನಂದರು ಇಲ್ಲಿ ತಂಗಿದ್ದರು ಎಂಬ ಕಾರಣಕ್ಕೆ ಈಗ ಮಠವನ್ನೇ ಕೊಡಿ ಎನ್ನುವುದು ಅದು ವಿವೇಕ ರಹಿತ ಚಿಂತನೆ, ವಿವೇಕ ರಹಿತ ತೀರ್ಮಾನ ಎಂದು ಬಿದರಿ ಕಟುವಾಗಿ ಟೀಕಿಸಿದರು.

ಹೊಸಮಠದ ಚಿದಾನಂದಸ್ವಾಮೀಜಿ, ಕುದೇರು ಮಠದ ಗುರುಶಾಂತಸ್ವಾಮೀಜಿ ಉಪಸ್ಥಿತರಿದ್ದರು. ನಿರಂಜನ ಮಠ ಸಂರಕ್ಷಣಾ ಸಮಿತಿ ಅಧ್ಯಕ್ಷ ಎಚ್.ವಿ. ಬಸವರಾಜು ಹಿನಕಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ಸುನಂದಾ ಪಾಲನೇತ್ರ,ಮಹಾಸಭಾದ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಕೆ.ಎಸ್.ಮಹದೇವ ಪ್ರಸಾದ್, ನಗರ ಘಟಕದ ಅಧ್ಯಕ್ಷ ಎಂ.ಎಚ್.ಚಂದ್ರಶೇಖರ್, ಬಸವಬಳಗಗಳ ಅಧ್ಯಕ್ಷ ಎಲ್.ಎಸ್.ಮಹದೇವಸ್ವಾಮಿ, ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಕೆ.ನಾಗರಾಜು, ನಟರಾಜ, ಶಶಿಧರ ಶಾನಭಾಗ್, ಟಿ.ಎಸ್.ಲೋಕೇಶ್ ಮತ್ತಿತರರು ಹಾಜರಿದ್ದರು.

 

 

 

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago