ಹನೂರು: ಕ್ಷೇತ್ರ ವ್ಯಾಪ್ತಿಯ ವರನಟ ಡಾ. ರಾಜ್ ಕುಮಾರ್ ರವರ ಸುಪುತ್ರ ನಟ ಪುನೀತ್ ರಾಜ್ ಕುಮಾರ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಸಂತಸದ ವಿಚಾರ ಎಂದು ಸಮಾಜ ಸೇವಕ ನಿಶಾಂತ್ ತಿಳಿಸಿದರು.
ಪಟ್ಟಣದ ನಿಶಾಂತ್ ಮಹಾಮನೆಯಿಂದ ಸತ್ತೇಗಾಲ ಹ್ಯಾಂಡ್ ಪೋಸ್ಟ್ ವರೆಗೆ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ನೆಲ ಜಲ ಭಾಷೆ ಉಳಿಸಲು ಪ್ರತಿಯೊಬ್ಬ ಕನ್ನಡಿಗರು ಶ್ರಮಿಸಬೇಕು. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ,ಈ ಕನ್ನಡ ನಾಡು ಶ್ರೀಗಂಧದ ಬೀಡು ನಮ್ಮ ಕರ್ನಾಟಕದ ವಿಚಾರಧಾರೆಗಳನ್ನು ಕ್ಷೇತ್ರದ ಪ್ರತಿಯೊಬ್ಬರಿಗೂ ತಿಳಿಸುವ ನಿಟ್ಟಿನಲ್ಲಿ ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡಿಗರು ಕೇವಲ ರಾಜ್ಯೋತ್ಸವಕ್ಕೆ ಸೀಮಿತವಾಗದೆ ವರ್ಷವೆಲ್ಲಾ ನಿತ್ಯೋತ್ಸವ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ನೂರಾರು ನಿಶಾಂತ್ ಅಭಿಮಾನಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಜಿ ಕೆ ಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವರಾಜು, ಬೈಲೂರು ಗ್ರಾಪಂ ಉಪಾಧ್ಯಕ್ಷ ಸದಾನಂದ ಮೂರ್ತಿ, ಮುಖಂಡರುಗಳಾದ ಕಿರಣ್, ಬಾಬು,ಸ್ವಾಮಿ ಯುವ ಮುಖಂಡರುಗಳಾದ ಚೇತನ್, ತೇಜು, ಗೌತಮ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…