ಹನೂರು: ಕ್ಷೇತ್ರ ವ್ಯಾಪ್ತಿಯ ವರನಟ ಡಾ. ರಾಜ್ ಕುಮಾರ್ ರವರ ಸುಪುತ್ರ ನಟ ಪುನೀತ್ ರಾಜ್ ಕುಮಾರ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಸಂತಸದ ವಿಚಾರ ಎಂದು ಸಮಾಜ ಸೇವಕ ನಿಶಾಂತ್ ತಿಳಿಸಿದರು.
ಪಟ್ಟಣದ ನಿಶಾಂತ್ ಮಹಾಮನೆಯಿಂದ ಸತ್ತೇಗಾಲ ಹ್ಯಾಂಡ್ ಪೋಸ್ಟ್ ವರೆಗೆ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ನೆಲ ಜಲ ಭಾಷೆ ಉಳಿಸಲು ಪ್ರತಿಯೊಬ್ಬ ಕನ್ನಡಿಗರು ಶ್ರಮಿಸಬೇಕು. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ,ಈ ಕನ್ನಡ ನಾಡು ಶ್ರೀಗಂಧದ ಬೀಡು ನಮ್ಮ ಕರ್ನಾಟಕದ ವಿಚಾರಧಾರೆಗಳನ್ನು ಕ್ಷೇತ್ರದ ಪ್ರತಿಯೊಬ್ಬರಿಗೂ ತಿಳಿಸುವ ನಿಟ್ಟಿನಲ್ಲಿ ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡಿಗರು ಕೇವಲ ರಾಜ್ಯೋತ್ಸವಕ್ಕೆ ಸೀಮಿತವಾಗದೆ ವರ್ಷವೆಲ್ಲಾ ನಿತ್ಯೋತ್ಸವ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ನೂರಾರು ನಿಶಾಂತ್ ಅಭಿಮಾನಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಜಿ ಕೆ ಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವರಾಜು, ಬೈಲೂರು ಗ್ರಾಪಂ ಉಪಾಧ್ಯಕ್ಷ ಸದಾನಂದ ಮೂರ್ತಿ, ಮುಖಂಡರುಗಳಾದ ಕಿರಣ್, ಬಾಬು,ಸ್ವಾಮಿ ಯುವ ಮುಖಂಡರುಗಳಾದ ಚೇತನ್, ತೇಜು, ಗೌತಮ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…