ಹನೂರು: ಕ್ಷೇತ್ರ ವ್ಯಾಪ್ತಿಯ ವರನಟ ಡಾ. ರಾಜ್ ಕುಮಾರ್ ರವರ ಸುಪುತ್ರ ನಟ ಪುನೀತ್ ರಾಜ್ ಕುಮಾರ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಸಂತಸದ ವಿಚಾರ ಎಂದು ಸಮಾಜ ಸೇವಕ ನಿಶಾಂತ್ ತಿಳಿಸಿದರು.
ಪಟ್ಟಣದ ನಿಶಾಂತ್ ಮಹಾಮನೆಯಿಂದ ಸತ್ತೇಗಾಲ ಹ್ಯಾಂಡ್ ಪೋಸ್ಟ್ ವರೆಗೆ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ನೆಲ ಜಲ ಭಾಷೆ ಉಳಿಸಲು ಪ್ರತಿಯೊಬ್ಬ ಕನ್ನಡಿಗರು ಶ್ರಮಿಸಬೇಕು. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ,ಈ ಕನ್ನಡ ನಾಡು ಶ್ರೀಗಂಧದ ಬೀಡು ನಮ್ಮ ಕರ್ನಾಟಕದ ವಿಚಾರಧಾರೆಗಳನ್ನು ಕ್ಷೇತ್ರದ ಪ್ರತಿಯೊಬ್ಬರಿಗೂ ತಿಳಿಸುವ ನಿಟ್ಟಿನಲ್ಲಿ ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡಿಗರು ಕೇವಲ ರಾಜ್ಯೋತ್ಸವಕ್ಕೆ ಸೀಮಿತವಾಗದೆ ವರ್ಷವೆಲ್ಲಾ ನಿತ್ಯೋತ್ಸವ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ನೂರಾರು ನಿಶಾಂತ್ ಅಭಿಮಾನಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಜಿ ಕೆ ಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವರಾಜು, ಬೈಲೂರು ಗ್ರಾಪಂ ಉಪಾಧ್ಯಕ್ಷ ಸದಾನಂದ ಮೂರ್ತಿ, ಮುಖಂಡರುಗಳಾದ ಕಿರಣ್, ಬಾಬು,ಸ್ವಾಮಿ ಯುವ ಮುಖಂಡರುಗಳಾದ ಚೇತನ್, ತೇಜು, ಗೌತಮ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…