ಜಿಲ್ಲೆಗಳು

ಜೀರಿಗೆ ಗದ್ದೆ ಗ್ರಾಮದ ಮೊಮ್ಮಗ ಪುನೀತ್, ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಹೆಮ್ಮೆಯ ವಿಚಾರ : ಶಾಸಕ ಆರ್ ನರೇಂದ್ರ

ಹನೂರು: ರಾಜ್ಯೋತ್ಸವದ ಸಂದರ್ಭದಲ್ಲಿ ನಮ್ಮವರೇ ಆದ ಜೀರಿಗೆ ಗದ್ದೆ ಗ್ರಾಮದ ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಿಂಗನಲ್ಲೂರು ಗ್ರಾಮದ ಮೊಮ್ಮಗ ಪ್ರಖ್ಯಾತ ಚಿತ್ರನಟ, ಮಾನವತವಾದಿ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯು ಆಯೋಜಿಸಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಬಾರಿ ವಿಶಿಷ್ಟವಾಗಿ ಓರ್ವ ಪೌರಕಾರ್ಮಿಕ ಮಹಿಳೆಯನ್ನು ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿರುವುದು ಕೂಡ ಅಭಿನಂದನೆಯ ವಿಚಾರ. ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಶಾಸ್ತ್ರೀಯ ಸ್ಥಾನಮಾನವೂ ಕೂಡ ಸಿಕ್ಕಿದೆ. ಶಾಸ್ತ್ರೀಯ ಸ್ಥಾನಮಾನವನ್ನು ನೀಡಿರುವ ಭಾಷೆಗೆ ಕೇಂದ್ರ ಸರ್ಕಾರ ಅನುದಾನವನ್ನು ನೀಡಬೇಕಾಗಿದೆ.

ಅನುಷ್ಠಾನವಾಗಿರುವುದು ಬಿಟ್ಟರೆ ಭಾಷೆ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಆದರೆ ಕರ್ನಾಟಕ ವಿಚಾರದಲ್ಲಿ ಭಾಷಾ ತಾರತಮ್ಯವನ್ನು ಮಾಡಲಾಗುತ್ತಿದೆ. ಇದರಿಂದ ಕರ್ನಾಟಕದ ಉದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕನ್ನಡಿಗರೇ ಕನ್ನಡವನ್ನು ನಿರ್ಲಕ್ಷಿಸುತ್ತಿದ್ದಾರೆ. ಆಗಾಗಬಾರದು ಶಾಲೆಗಳಲ್ಲಿ ಇಂಗ್ಲೀಷ್ ವ್ಯಾಮೋಹ ಹೆಚ್ಚುತ್ತಿದೆ. ಬೆಂಗಳೂರು ಕೆಲವಡೆ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸುತ್ತಿದ್ದಾರೆ ಇದು ವಿಷಾನಿಯ ಎಂದು ನುಡಿದ ಅವರು ತಾಲೂಕಿನ ಕಾಡಂಚಿನ ಗ್ರಾಮಗಳಾದ ಗೋಪಿನಾಥಮ್, ತೋಮಿಯರ್ ಪಾಳ್ಯ ಇನ್ನಿತರಡೆ ತಮಿಳು ಭಾಷಿಕರ ಪ್ರಭಾವವಿರುವ ಗಡಿ ಗ್ರಾಮಗಳಲ್ಲೂ ಕೂಡ ವಿದ್ಯಾರ್ಥಿಗಳು ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿರುವುದು ಮೆಚ್ಚುಗೆಯ ಸಂಗತಿ ಎಂದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ ಗೋಪಿನಾಥಂ ಸರ್ಕಾರಿ ಪ್ರೌಢಶಾಲೆಯ ಮಹೇಂದ್ರ ಪಾಟೀಲ್ ಮಾತನಾಡಿ, ಕನ್ನಡ ಏಕೀಕರಣಕ್ಕೆ ಆಲೂರು ವೆಂಕಟರಾಯರು ಅಡಿಗಲ್ಲು ಇಟ್ಟವರು. ಅವರ ತುರುವಾಯ ಕನ್ನಡಪರ ಹೋರಾಟಗಾರರ ಅವಿರತ ಶ್ರಮದಿಂದ ಮೈಸೂರು ಅಭಿದಾನದೊಂದಿಗೆ ಮೈಸೂರು ರಾಜ್ಯ ಉದಯವಾಯಿತು. ಮೈಸೂರು ರಾಜ್ಯ ಬಳಿಕ ಕರ್ನಾಟಕ ರಾಜ್ಯವಾಗಿ ಅಭಿದಾನ ಹೊಂದಿತು. ಕನ್ನಡ ಭಾಷೆಗೆ ಶ್ರೇಷ್ಠವಾದ ಸ್ಥಾನಮಾನವಿದೆ. ಕನ್ನಡವನ್ನು ಬಳಸಿದರೆ ಸಾಕು ಅದು ಉಳಿಯುತ್ತದೆ ಎಂದರು.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಮತ್ತು 124 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕನ್ನಡ ಗೀತೆಗಳಿಗೆ ನೃತ್ಯ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಜಲ ಅಭಿಮಾನವನ್ನು ಸಾರುವ ಗೀತೆಗಳಿಗೆ ನೃತ್ಯ ಪ್ರದರ್ಶಿಸಿ ನೆರೆದಿದ್ದವರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸುದೇಶ್, ಹರೀಶ್, ಸಂಪತ್ ಕುಮಾರ್, ಮುಮ್ತಾಜ್ ಬೇಗಂ, ಸೋಮಶೇಖರ್, ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಪಶುಪಾಲನ ಇಲಾಖೆಯ ಸಿದ್ದರಾಜು, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಮೂರ್ತಿ, ಕೃಷಿ ಅಧಿಕಾರಿ ರಘುವೀರ್, ಶಿಕ್ಷಣ ಇಲಾಖೆಯ ಕಿರಣ್, ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ,ದೈಹಿಕ ಶಿಕ್ಷಣ ಸಂಯೋಜಕ ಮಹದೇವ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

andolana

Recent Posts

ಹುದ್ದೆಗಳ ಭರ್ತಿ ನಡೆಯಲಿ; ಯುವಶಕ್ತಿಯನ್ನು ಕಡೆಗಣಿಸದಿರಲಿ

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, …

15 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಬಿಜೆಪಿ-ಜಾ.ದಳ ಪಾಳೆಯಗಳಿಗೆ  ಹರ್ಷ ತಂದಿರುವ ರಾಜ್ಯ ರಾಜಕಾರಣ

ಜಾ.ದಳ ಸಮಾವೇಶ, ಯಡಿಯೂರೋತ್ಸವದ ಮೂಲಕ ಮತದಾರರ ಗಮನ ಸೆಳೆಯಲು ಯತ್ನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ-ಜಾ.ದಳ ಪಾಳೆಯಗಳಿಗೆ ಹರ್ಷ ತಂದಿರುವುದು…

27 mins ago

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

4 hours ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

4 hours ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

4 hours ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

4 hours ago