ಜಿಲ್ಲೆಗಳು

ಇದು ನಮ್ಮ ಬೊಂಬೆ ಮನೆ: ಹೇಮಲತಾ ಮನೆಯಲ್ಲಿ ಬೊಂಬೆಗಳ ದರ್ಬಾರ್

ಹೇಮಲತಾ ಮನೆಯಲ್ಲಿ ಬೊಂಬೆಗಳ ದರ್ಬಾರ್

ಅತಿ ಪುರಾತನವಾದ, ದೇಶ-ವಿದೇಶಗಳಿಂದ ತಂದ, ಮಣ್ಣಿನ, ಕಂಚಿನ, ಮರದ, ವಿವಿಧ ಬಗೆಯ ಲೋಹಗಳಿಂದ ಮಾಡಿದ ಅತ್ಯಾಕರ್ಷಕ, ಒಂದೊಂದು ಪರಿಕಲ್ಪನೆ ಇಟ್ಟುಕೊಂಡು ಕೂರಿಸಿದ ಬೊಂಬೆಗಳನ್ನು ನೋಡಬೇಕು ಎಂದರೆ ಮೈಸೂರಿನ ರಾಮಚಂದ್ರ ಅಗ್ರಹಾರದಲ್ಲಿರುವ ನಿವೃತ್ತ ಉಪತಹಶಿಲ್ದಾರ್ ಹೇಮಲತಾ ಕುಮಾರಸ್ವಾಮಿ ಅವರ ಮನೆಗೆ ಭೇಟಿ ನೀಡಬೇಕು.

ಸುಮಾರು ೩೦-೩೫ ವರ್ಷಗಳಿಂದಲೂ ಬೊಂಬೆಗಳನ್ನು ಕೂರಿಸುತ್ತಾ ಬಂದಿರುವ ಇವರ ಬಳಿ ೧೫ ಸಾವಿರಕ್ಕೂ ಹೆಚ್ಚು ಬೊಂಬೆಗಳ ಸಂಗ್ರವಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿಯೂ ಮನೆಯಲ್ಲಿ ೯ ಹಂತಗಳಲ್ಲಿ ಬೊಂಬೆಗಳನ್ನು ಕೂರಿಸುವ ಇವರು ಈ ಬಾರಿ ಕೆಆರ್‌ಎಸ್ ಡ್ಯಾಂ, ಕೊಲ್ಲೂರು ಮೂಕಾಂಬಿಕೆ, ಹೊರನಾಡು ಅನ್ನಪೂರ್ಣೆ, ಶೃಂಗೇರಿ ಶಾರದೆ, ಮೈಸೂರು ಚಾಮುಂಡೇಶ್ವರಿ, ಕಂಚಿ ಕಾಮಾಕ್ಷಿ, ಮಧುರೈ ಮೀನಾಕ್ಷಿ, ಕಾಶಿ ಅನ್ನಪೂರ್ಣೇಶ್ವರಿ, ತಮಿಳುನಾಡಿನ ಚೋಟಾಣಿ ಅಮ್ಮನವರ ಬೊಂಬೆಗಳನ್ನು ಕೂರಿಸಲಾಗಿದೆ.

ಪಟ್ಟದ ಬೊಂಬೆಗಳು, ರಾಜರಾಜೇಶ್ವರಿ ದರ್ಬಾರು, ದುರ್ಗಾಪೂಜೆ, ದಶಾವತಾರ, ಸಪ್ತಋಷಿಗಳು, ಶಂಕರಾಚಾರ್ಯ ಜೀವನ ಚರಿತ್ರೆ, ರಾಮಾಯಣ ಕಥೆ ಹೇಳುವ ಬೊಂಬೆಗಳು ಎಲ್ಲರನ್ನೂ ಆಕರ್ಷಣೆ ಮಾಡುತ್ತಿವೆ.

ಬೊಂಬೆಗಳನ್ನು ಕೂರಿಸುವಾಗ ಎಷ್ಟು ಖುಷಿಯಿಂದ ಕೂರಿಸುತ್ತವೆೋಂ ಅಷ್ಟೇ ಜಬ್ದಾರಿಯುತವಾಗಿ, ಎತ್ತಿಡಬೇಕು. ಇದರಲ್ಲಿ ಆಸಕ್ತಿ ಮತ್ತು ತಾಳ್ಮೆ ಬಹುಮುಖ್ಯ ಎನ್ನುವ ಹೇಮಲತಾ ಅವರು ಹೋದ ಕಡೆಗಳಲೆಲ್ಲಾ ಇಷ್ಟವಾದ ಬೊಂಬೆಗಳನ್ನು ತರುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಮಗ ಕಾರ್ತಿಕ್ ಅವರೂ ತಾಯಿಯ ಈ ಚೆಂದದ ಕಾರ್ಯಕ್ಕೆ ಕೈ ಜೋಡಿಸುತ್ತಿದ್ದಾರೆ.

ಬೊಂಬೆ ಕೂರಿಸಿದವರು
ಹೇಮಲತಾ ಕುಮಾರಸ್ವಾಮಿ
ನಿವೃತ್ತ ಉಪತಹಶಿಲ್ದಾರ್, ನಂ. ೫೬೭/೩೨ನೇ ರಾಮಚಂದ್ರ ಅಗ್ರಹಾರ, ಮೈಸೂರು

andolanait

Recent Posts

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

32 mins ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

36 mins ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

2 hours ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

2 hours ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

3 hours ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

3 hours ago