ಜಿಲ್ಲೆಗಳು

ಇದು ನಮ್ಮ ಬೊಂಬೆ ಮನೆ: ಹೇಮಲತಾ ಮನೆಯಲ್ಲಿ ಬೊಂಬೆಗಳ ದರ್ಬಾರ್

ಹೇಮಲತಾ ಮನೆಯಲ್ಲಿ ಬೊಂಬೆಗಳ ದರ್ಬಾರ್

ಅತಿ ಪುರಾತನವಾದ, ದೇಶ-ವಿದೇಶಗಳಿಂದ ತಂದ, ಮಣ್ಣಿನ, ಕಂಚಿನ, ಮರದ, ವಿವಿಧ ಬಗೆಯ ಲೋಹಗಳಿಂದ ಮಾಡಿದ ಅತ್ಯಾಕರ್ಷಕ, ಒಂದೊಂದು ಪರಿಕಲ್ಪನೆ ಇಟ್ಟುಕೊಂಡು ಕೂರಿಸಿದ ಬೊಂಬೆಗಳನ್ನು ನೋಡಬೇಕು ಎಂದರೆ ಮೈಸೂರಿನ ರಾಮಚಂದ್ರ ಅಗ್ರಹಾರದಲ್ಲಿರುವ ನಿವೃತ್ತ ಉಪತಹಶಿಲ್ದಾರ್ ಹೇಮಲತಾ ಕುಮಾರಸ್ವಾಮಿ ಅವರ ಮನೆಗೆ ಭೇಟಿ ನೀಡಬೇಕು.

ಸುಮಾರು ೩೦-೩೫ ವರ್ಷಗಳಿಂದಲೂ ಬೊಂಬೆಗಳನ್ನು ಕೂರಿಸುತ್ತಾ ಬಂದಿರುವ ಇವರ ಬಳಿ ೧೫ ಸಾವಿರಕ್ಕೂ ಹೆಚ್ಚು ಬೊಂಬೆಗಳ ಸಂಗ್ರವಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿಯೂ ಮನೆಯಲ್ಲಿ ೯ ಹಂತಗಳಲ್ಲಿ ಬೊಂಬೆಗಳನ್ನು ಕೂರಿಸುವ ಇವರು ಈ ಬಾರಿ ಕೆಆರ್‌ಎಸ್ ಡ್ಯಾಂ, ಕೊಲ್ಲೂರು ಮೂಕಾಂಬಿಕೆ, ಹೊರನಾಡು ಅನ್ನಪೂರ್ಣೆ, ಶೃಂಗೇರಿ ಶಾರದೆ, ಮೈಸೂರು ಚಾಮುಂಡೇಶ್ವರಿ, ಕಂಚಿ ಕಾಮಾಕ್ಷಿ, ಮಧುರೈ ಮೀನಾಕ್ಷಿ, ಕಾಶಿ ಅನ್ನಪೂರ್ಣೇಶ್ವರಿ, ತಮಿಳುನಾಡಿನ ಚೋಟಾಣಿ ಅಮ್ಮನವರ ಬೊಂಬೆಗಳನ್ನು ಕೂರಿಸಲಾಗಿದೆ.

ಪಟ್ಟದ ಬೊಂಬೆಗಳು, ರಾಜರಾಜೇಶ್ವರಿ ದರ್ಬಾರು, ದುರ್ಗಾಪೂಜೆ, ದಶಾವತಾರ, ಸಪ್ತಋಷಿಗಳು, ಶಂಕರಾಚಾರ್ಯ ಜೀವನ ಚರಿತ್ರೆ, ರಾಮಾಯಣ ಕಥೆ ಹೇಳುವ ಬೊಂಬೆಗಳು ಎಲ್ಲರನ್ನೂ ಆಕರ್ಷಣೆ ಮಾಡುತ್ತಿವೆ.

ಬೊಂಬೆಗಳನ್ನು ಕೂರಿಸುವಾಗ ಎಷ್ಟು ಖುಷಿಯಿಂದ ಕೂರಿಸುತ್ತವೆೋಂ ಅಷ್ಟೇ ಜಬ್ದಾರಿಯುತವಾಗಿ, ಎತ್ತಿಡಬೇಕು. ಇದರಲ್ಲಿ ಆಸಕ್ತಿ ಮತ್ತು ತಾಳ್ಮೆ ಬಹುಮುಖ್ಯ ಎನ್ನುವ ಹೇಮಲತಾ ಅವರು ಹೋದ ಕಡೆಗಳಲೆಲ್ಲಾ ಇಷ್ಟವಾದ ಬೊಂಬೆಗಳನ್ನು ತರುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಮಗ ಕಾರ್ತಿಕ್ ಅವರೂ ತಾಯಿಯ ಈ ಚೆಂದದ ಕಾರ್ಯಕ್ಕೆ ಕೈ ಜೋಡಿಸುತ್ತಿದ್ದಾರೆ.

ಬೊಂಬೆ ಕೂರಿಸಿದವರು
ಹೇಮಲತಾ ಕುಮಾರಸ್ವಾಮಿ
ನಿವೃತ್ತ ಉಪತಹಶಿಲ್ದಾರ್, ನಂ. ೫೬೭/೩೨ನೇ ರಾಮಚಂದ್ರ ಅಗ್ರಹಾರ, ಮೈಸೂರು

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

18 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

22 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

22 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

22 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

22 hours ago