ಮೈಸೂರು : ಪೂಜಾ ಸ್ಥಳಗಳ ಕಾಯ್ದೆಯನ್ನು ಉಲ್ಲಂಘಿಸಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ಜಾಮಿಯಾ ಮಸೀದಿಯನ್ನು ವಿವಾದವನ್ನಾಗಿಸುತ್ತಿರುವ ಸಂಘ ಪರಿವಾರ ಈ ಭಾಗದಲ್ಲಿ ಕೋಮು ವಿದ್ವೇಷ ಹರಡಿ ಸೌಹಾರ್ದತೆಗೆ ಧಕ್ಕೆ ತರುತ್ತಿದೆ. ಈ ವಿಚಾರದಲ್ಲಿ ಪೊಲೀಸ್ ಉನ್ನತಾಧಿಕಾರಿಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಸಂಘ ಪರಿವಾರ ಪೂಜಾ ಸ್ಥಳಗಳ ಕಾಯ್ದೆಯನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಲೇ ಬರುತ್ತಿದೆ. 1991ರ ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ಯಾವುದೇ ಪೂಜಾ ಸ್ಥಳದ ವಿಚಾರದಲ್ಲಿ 1947, ಆಗಸ್ಟ್ 15ಕ್ಕೆ ಅನ್ವಯಿಸುವಂತೆ ಯಥಾಸ್ಥಿತಿ ಕಾಪಾಡಬೇಕಾಗುತ್ತದೆ. ಪೂಜಾ ಸ್ಥಳಗಳನ್ನು ವಿವಾದವಾಗಿಸುವುದು, ಪರಿವರ್ತಿಸಲು ಪ್ರಯತ್ನಿಸುವುದು, ಕೆಡವಲು ಸಂಚು ರೂಪಿಸುವುದು ಅಪರಾಧವಾಗುತ್ತದೆ. ಇಂತಹ ಕೃತ್ಯಗಳ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಜೀದ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಆದರೆ ಶೋಭಾಯಾತ್ರೆ ಹೆಸರಲ್ಲಿ, ಹನುಮ ಜಯಂತಿಯ ನೆಪದಲ್ಲಿ ಕೋಮು ಸೌಹಾರ್ದತೆಯನ್ನು ಕದಡಿ ತನ್ನ ರಾಜಕೀಯ ಲಾಭಕ್ಕೆ ಪಟ್ಟಣವನ್ನು ಕೋಮುದಳ್ಳುರಿಗೆ ತಳ್ಳುವ ನೀಚ ಕೆಲಸಕ್ಕೆ ಸಂಘ ಪರಿವಾರ ಕೈ ಹಾಕಿದೆ ಎಂದು ಆರೋಪಿಸಿದ ಮಜೀದ್ ಅವರು, ಪೊಲೀಸರು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು, ಆದರೆ ಸಂಘ ಪರಿವಾರದ ದ್ವೇಷದ ಕೃತ್ಯಗಳಿಗೆ ಬೆಂಬಲವಾಗಿ ಸ್ವತಃ ಕೋಮುವಾದಿ ಬಿಜೆಪಿ ಪಕ್ಷದ ಸರ್ಕಾರವೇ ನಿಂತಿರುವುದರಿಂದ ಪೊಲೀಸರು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಿ ಕಾನೂನು ಕಾಪಾಡಲು ಸಾಧ್ಯವಾಗುತ್ತಿಲ್ಲ ಎಂದು ಮಜೀದ್ ಆರೋಪಿಸಿದರು.
ಶ್ರೀರಂಗಪಟ್ಟಣದ ಪ್ರಕರಣದಲ್ಲಿ ಮುಸ್ಲಿಮರ ಮನೆ ಮೇಲೆ ಹಾರಿಸಿದ್ದ ಹಸಿರು ಧ್ವಜವನ್ನು ಕಿತ್ತೆಸೆದು ವಿಕೃತಿ ಮೆರೆದಿದ್ದ ಸಂಘ ಪರಿವಾರದ ಸದಸ್ಯನ ಮೇಲೆ ಪೊಲೀಸರು ಕ್ರಮ ಕೈಗೊಂಡಾಗ ಪೊಲೀಸರ ವಿರುದ್ಧವೇ ಸಂಘ ಪರಿವಾರದ ಗೂಂಡಾಗಳು ಪ್ರತಿಭಟನೆ ನಡೆಸಿ, ಕ್ರಮ ಕೈಗೊಂಡ ಪೊಲೀಸರ ವಿರುದ್ಧವೇ ಕ್ರಮ ಜರುಗಿಸಲಾಗುವುದು ಎನ್ನುವ ಭರವಸೆಯನ್ನು ಪೊಲೀಸ್ ಉನ್ನತಾಧಿಕಾರಿಗಳಿಂದಲೇ ಪಡೆದುಕೊಂಡಿದ್ದಾರೆ. ಹೀಗಿರುವಾಗ ಪೊಲೀಸರು ಕ್ರಮ ಕೈಗೊಳ್ಳಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ತನ್ನ ರಾಜಕೀಯ ಕುತಂತ್ರಗಳನ್ನು ಬದಿಗೆ ಸರಿಸಿ ಪೂಜಾ ಸ್ಥಳಗಳ ಕಾಯ್ದೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ನಡೆದುಕೊಳ್ಳಬೇಕು ಎಂದು ಅಬ್ದುಲ್ ಮಜೀದ್ ಅವರು ತಮ್ಮ ಹೇಳಿಕೆಯ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…
ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…
ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ…
ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…