ಜಿಲ್ಲೆಗಳು

ಜಾಮಿಯಾ ಮಸೀದಿಯನ್ನು ವಿವಾದವನ್ನಾಗಿಸುತ್ತಿರುವ ಆರೋಪ : ಕಾನೂನು ಕ್ರಮಕ್ಕೆ ಅಬ್ದುಲ್ ಮಜೀದ್ ಆಗ್ರಹಿಸಿ

ಮೈಸೂರು : ಪೂಜಾ ಸ್ಥಳಗಳ ಕಾಯ್ದೆಯನ್ನು ಉಲ್ಲಂಘಿಸಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ಜಾಮಿಯಾ ಮಸೀದಿಯನ್ನು ವಿವಾದವನ್ನಾಗಿಸುತ್ತಿರುವ ಸಂಘ ಪರಿವಾರ ಈ ಭಾಗದಲ್ಲಿ ಕೋಮು ವಿದ್ವೇಷ ಹರಡಿ ಸೌಹಾರ್ದತೆಗೆ ಧಕ್ಕೆ ತರುತ್ತಿದೆ. ಈ ವಿಚಾರದಲ್ಲಿ ಪೊಲೀಸ್ ಉನ್ನತಾಧಿಕಾರಿಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಸಂಘ ಪರಿವಾರ ಪೂಜಾ ಸ್ಥಳಗಳ ಕಾಯ್ದೆಯನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಲೇ ಬರುತ್ತಿದೆ. 1991ರ ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ಯಾವುದೇ ಪೂಜಾ ಸ್ಥಳದ ವಿಚಾರದಲ್ಲಿ 1947, ಆಗಸ್ಟ್ 15ಕ್ಕೆ ಅನ್ವಯಿಸುವಂತೆ ಯಥಾಸ್ಥಿತಿ ಕಾಪಾಡಬೇಕಾಗುತ್ತದೆ. ಪೂಜಾ ಸ್ಥಳಗಳನ್ನು ವಿವಾದವಾಗಿಸುವುದು, ಪರಿವರ್ತಿಸಲು ಪ್ರಯತ್ನಿಸುವುದು, ಕೆಡವಲು ಸಂಚು ರೂಪಿಸುವುದು ಅಪರಾಧವಾಗುತ್ತದೆ. ಇಂತಹ ಕೃತ್ಯಗಳ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಜೀದ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಆದರೆ ಶೋಭಾಯಾತ್ರೆ ಹೆಸರಲ್ಲಿ, ಹನುಮ ಜಯಂತಿಯ ನೆಪದಲ್ಲಿ ಕೋಮು ಸೌಹಾರ್ದತೆಯನ್ನು ಕದಡಿ ತನ್ನ ರಾಜಕೀಯ ಲಾಭಕ್ಕೆ ಪಟ್ಟಣವನ್ನು ಕೋಮುದಳ್ಳುರಿಗೆ ತಳ್ಳುವ ನೀಚ ಕೆಲಸಕ್ಕೆ ಸಂಘ ಪರಿವಾರ ಕೈ ಹಾಕಿದೆ ಎಂದು ಆರೋಪಿಸಿದ ಮಜೀದ್ ಅವರು, ಪೊಲೀಸರು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು, ಆದರೆ ಸಂಘ ಪರಿವಾರದ ದ್ವೇಷದ ಕೃತ್ಯಗಳಿಗೆ ಬೆಂಬಲವಾಗಿ ಸ್ವತಃ ಕೋಮುವಾದಿ ಬಿಜೆಪಿ ಪಕ್ಷದ ಸರ್ಕಾರವೇ ನಿಂತಿರುವುದರಿಂದ ಪೊಲೀಸರು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಿ ಕಾನೂನು ಕಾಪಾಡಲು ಸಾಧ್ಯವಾಗುತ್ತಿಲ್ಲ ಎಂದು ಮಜೀದ್ ಆರೋಪಿಸಿದರು.

ಶ್ರೀರಂಗಪಟ್ಟಣದ ಪ್ರಕರಣದಲ್ಲಿ ಮುಸ್ಲಿಮರ ಮನೆ ಮೇಲೆ ಹಾರಿಸಿದ್ದ ಹಸಿರು ಧ್ವಜವನ್ನು ಕಿತ್ತೆಸೆದು ವಿಕೃತಿ ಮೆರೆದಿದ್ದ ಸಂಘ ಪರಿವಾರದ ಸದಸ್ಯನ ಮೇಲೆ ಪೊಲೀಸರು ಕ್ರಮ ಕೈಗೊಂಡಾಗ ಪೊಲೀಸರ ವಿರುದ್ಧವೇ ಸಂಘ ಪರಿವಾರದ ಗೂಂಡಾಗಳು ಪ್ರತಿಭಟನೆ ನಡೆಸಿ, ಕ್ರಮ ಕೈಗೊಂಡ ಪೊಲೀಸರ ವಿರುದ್ಧವೇ ಕ್ರಮ ಜರುಗಿಸಲಾಗುವುದು ಎನ್ನುವ ಭರವಸೆಯನ್ನು ಪೊಲೀಸ್ ಉನ್ನತಾಧಿಕಾರಿಗಳಿಂದಲೇ ಪಡೆದುಕೊಂಡಿದ್ದಾರೆ. ಹೀಗಿರುವಾಗ ಪೊಲೀಸರು ಕ್ರಮ ಕೈಗೊಳ್ಳಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ ತನ್ನ ರಾಜಕೀಯ ಕುತಂತ್ರಗಳನ್ನು ಬದಿಗೆ ಸರಿಸಿ ಪೂಜಾ ಸ್ಥಳಗಳ ಕಾಯ್ದೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ನಡೆದುಕೊಳ್ಳಬೇಕು ಎಂದು ಅಬ್ದುಲ್ ಮಜೀದ್ ಅವರು ತಮ್ಮ ಹೇಳಿಕೆಯ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago