ಜಿಲ್ಲೆಗಳು

ಜಾಗೇರಿ ಸಾಗುವಳಿ ಜಮೀನು ಸಮಸ್ಯೆ ಶೀಘ್ರದಲ್ಲೇ ಮುಕ್ತಾಯ : ಶಾಸಕ ಆರ್. ನರೇಂದ್ರ

ಹನೂರು: ತಾಲೂಕಿನ ನೆಲ್ಲೂರು, ಹೂಗ್ಯಂ, ನಾಗಣ್ಣನಗರ ಹಾಗೂ ಜಾಗೇರಿ ಸಾಗುವಳಿ ಜಮೀನು ಸಮಸ್ಯೆ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಪಿಡಬ್ಯುಡಿ ವಸತಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಲ್ಲೂರು ಗ್ರಾಮದಲ್ಲಿ 8 ಎಕರೆ ದರ್ಖಾಸ್ ಜಮೀನು ಇದೆ. ಆದರೆ ಆ ಜಾಗವನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದು, ಕಂದಕವನ್ನು ನಿರ್ಮಿಸಲಾಗಿದೆ. ಹಾಗಾಗಿ ಈ ಬಗ್ಗೆ ಸರ್ವೇ ಕಾರ್ಯ ನಡೆಸಲು ತಹಸೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಜಾಗವನ್ನು ನಿವೇಶನವನ್ನಾಗಿ ಪರಿವರ್ತಿಸಿ ಜನರಿಗೆ ನೀಡಲಾಗುವುದು. ಜೊತೆಗೆ ಜಾಗೇರಿಯ ಅರಣ್ಯ ಪ್ರದೇಶದಲ್ಲಿ 3 ಸಾವಿರ ಎಕರೆಯಲ್ಲಿ ರೈತರು ಹಲವು ವರ್ಷಗಳಿಂದ ಸ್ವಾಧೀನದಲ್ಲಿದ್ದು, ಕೃಷಿ ಮಾಡುತ್ತಿದ್ದಾರೆ. ಆದರೆ ಸಾಗುವಳಿ ಚೀಟಿ ನೀಡುವಲ್ಲಿ ಅರಣ್ಯ ಇಲಾಖೆಯಿಂದ ಸಮಸ್ಯೆಯಾಗುತ್ತಿದೆ. ಈ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದ್ದು, ಫೆ.15 ರೊಳಗೆ ಸಂಪೂರ್ಣ ಸರ್ವೇ ಮಾಡಿ ಅದರ ವರದಿಯನ್ನು ಸಲ್ಲಿಸಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅಲ್ಲದೇ ಹೂಗ್ಯಂ ಗ್ರಾಮದ ಸರ್ವೇ ನಂಬರ್ 239ರಲ್ಲಿ 2 ಸಾವಿರ ಎಕರೆಯಲ್ಲಿ ಈ ಹಿಂದೆ ರೈತರು ರೈತರು ಸಾಗುವಳಿ ಮಾಡುತ್ತಿದ್ದರು. ಆದರೆ ಇದೀಗ ಅರಣ್ಯ ಇಲಾಖೆ ಸ್ವಾಧೀನ ಪಡಿಸಿಕೊಂಡಿದೆ. ಇನ್ನು ನಾಗಣ್ಣ ನಗರದಲ್ಲಿ 2 ಎಕರೆಯಲ್ಲಿ ಕೃಷಿ ಮಾಡುತ್ತಿರುವ ರೈತರು ಹಾಗೂ ದಾಖಲೆಗಳಲ್ಲಿ ವ್ಯತ್ಯಾಸವಿದೆ. ಆದ್ದರಿಂದ ಸರ್ವೇ ಮಾಡಿ ತಿದ್ದುಪಡಿ ಮಾಡುವಂತೆ ತಿಳಿಸಲಾಗಿದೆ.

ತಾಲೂಕಿನ ಚಂಗಡಿ ಗ್ರಾಮದ ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಂಡು 2 ವರ್ಷವೇ ಕಳೆದಿದ್ದು, ಗ್ರಾಮದ ಜನರಿಗೆ ಪುನರ್ವಸತಿ ಕಲ್ಪಿಸಲು ಸ್ಥಳವನ್ನು ಗುರ್ತಿಸಲಾಗಿದೆ.ಆದರೆ ಸರ್ಕಾರದಿಂದ ಇನ್ನು ಅನುದಾನ ಬಿಡುಗಡೆಯಾಗಿಲ್ಲ.ಆದ್ದರಿಂದ ಸರ್ಕಾರದಿಂದ ಅನುದಾನ ಬಿಡುಗಡೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.

andolanait

Recent Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

3 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

3 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

4 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

4 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

4 hours ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

5 hours ago