ಹನೂರು: ತಾಲೂಕಿನ ನೆಲ್ಲೂರು, ಹೂಗ್ಯಂ, ನಾಗಣ್ಣನಗರ ಹಾಗೂ ಜಾಗೇರಿ ಸಾಗುವಳಿ ಜಮೀನು ಸಮಸ್ಯೆ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಪಿಡಬ್ಯುಡಿ ವಸತಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಲ್ಲೂರು ಗ್ರಾಮದಲ್ಲಿ 8 ಎಕರೆ ದರ್ಖಾಸ್ ಜಮೀನು ಇದೆ. ಆದರೆ ಆ ಜಾಗವನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದು, ಕಂದಕವನ್ನು ನಿರ್ಮಿಸಲಾಗಿದೆ. ಹಾಗಾಗಿ ಈ ಬಗ್ಗೆ ಸರ್ವೇ ಕಾರ್ಯ ನಡೆಸಲು ತಹಸೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಜಾಗವನ್ನು ನಿವೇಶನವನ್ನಾಗಿ ಪರಿವರ್ತಿಸಿ ಜನರಿಗೆ ನೀಡಲಾಗುವುದು. ಜೊತೆಗೆ ಜಾಗೇರಿಯ ಅರಣ್ಯ ಪ್ರದೇಶದಲ್ಲಿ 3 ಸಾವಿರ ಎಕರೆಯಲ್ಲಿ ರೈತರು ಹಲವು ವರ್ಷಗಳಿಂದ ಸ್ವಾಧೀನದಲ್ಲಿದ್ದು, ಕೃಷಿ ಮಾಡುತ್ತಿದ್ದಾರೆ. ಆದರೆ ಸಾಗುವಳಿ ಚೀಟಿ ನೀಡುವಲ್ಲಿ ಅರಣ್ಯ ಇಲಾಖೆಯಿಂದ ಸಮಸ್ಯೆಯಾಗುತ್ತಿದೆ. ಈ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದ್ದು, ಫೆ.15 ರೊಳಗೆ ಸಂಪೂರ್ಣ ಸರ್ವೇ ಮಾಡಿ ಅದರ ವರದಿಯನ್ನು ಸಲ್ಲಿಸಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಅಲ್ಲದೇ ಹೂಗ್ಯಂ ಗ್ರಾಮದ ಸರ್ವೇ ನಂಬರ್ 239ರಲ್ಲಿ 2 ಸಾವಿರ ಎಕರೆಯಲ್ಲಿ ಈ ಹಿಂದೆ ರೈತರು ರೈತರು ಸಾಗುವಳಿ ಮಾಡುತ್ತಿದ್ದರು. ಆದರೆ ಇದೀಗ ಅರಣ್ಯ ಇಲಾಖೆ ಸ್ವಾಧೀನ ಪಡಿಸಿಕೊಂಡಿದೆ. ಇನ್ನು ನಾಗಣ್ಣ ನಗರದಲ್ಲಿ 2 ಎಕರೆಯಲ್ಲಿ ಕೃಷಿ ಮಾಡುತ್ತಿರುವ ರೈತರು ಹಾಗೂ ದಾಖಲೆಗಳಲ್ಲಿ ವ್ಯತ್ಯಾಸವಿದೆ. ಆದ್ದರಿಂದ ಸರ್ವೇ ಮಾಡಿ ತಿದ್ದುಪಡಿ ಮಾಡುವಂತೆ ತಿಳಿಸಲಾಗಿದೆ.
ತಾಲೂಕಿನ ಚಂಗಡಿ ಗ್ರಾಮದ ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಂಡು 2 ವರ್ಷವೇ ಕಳೆದಿದ್ದು, ಗ್ರಾಮದ ಜನರಿಗೆ ಪುನರ್ವಸತಿ ಕಲ್ಪಿಸಲು ಸ್ಥಳವನ್ನು ಗುರ್ತಿಸಲಾಗಿದೆ.ಆದರೆ ಸರ್ಕಾರದಿಂದ ಇನ್ನು ಅನುದಾನ ಬಿಡುಗಡೆಯಾಗಿಲ್ಲ.ಆದ್ದರಿಂದ ಸರ್ಕಾರದಿಂದ ಅನುದಾನ ಬಿಡುಗಡೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…