ಜಿಲ್ಲೆಗಳು

ಜಾಗೇರಿ ಸಾಗುವಳಿ ಜಮೀನು ಸಮಸ್ಯೆ ಶೀಘ್ರದಲ್ಲೇ ಮುಕ್ತಾಯ : ಶಾಸಕ ಆರ್. ನರೇಂದ್ರ

ಹನೂರು: ತಾಲೂಕಿನ ನೆಲ್ಲೂರು, ಹೂಗ್ಯಂ, ನಾಗಣ್ಣನಗರ ಹಾಗೂ ಜಾಗೇರಿ ಸಾಗುವಳಿ ಜಮೀನು ಸಮಸ್ಯೆ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಪಿಡಬ್ಯುಡಿ ವಸತಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಲ್ಲೂರು ಗ್ರಾಮದಲ್ಲಿ 8 ಎಕರೆ ದರ್ಖಾಸ್ ಜಮೀನು ಇದೆ. ಆದರೆ ಆ ಜಾಗವನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದು, ಕಂದಕವನ್ನು ನಿರ್ಮಿಸಲಾಗಿದೆ. ಹಾಗಾಗಿ ಈ ಬಗ್ಗೆ ಸರ್ವೇ ಕಾರ್ಯ ನಡೆಸಲು ತಹಸೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಜಾಗವನ್ನು ನಿವೇಶನವನ್ನಾಗಿ ಪರಿವರ್ತಿಸಿ ಜನರಿಗೆ ನೀಡಲಾಗುವುದು. ಜೊತೆಗೆ ಜಾಗೇರಿಯ ಅರಣ್ಯ ಪ್ರದೇಶದಲ್ಲಿ 3 ಸಾವಿರ ಎಕರೆಯಲ್ಲಿ ರೈತರು ಹಲವು ವರ್ಷಗಳಿಂದ ಸ್ವಾಧೀನದಲ್ಲಿದ್ದು, ಕೃಷಿ ಮಾಡುತ್ತಿದ್ದಾರೆ. ಆದರೆ ಸಾಗುವಳಿ ಚೀಟಿ ನೀಡುವಲ್ಲಿ ಅರಣ್ಯ ಇಲಾಖೆಯಿಂದ ಸಮಸ್ಯೆಯಾಗುತ್ತಿದೆ. ಈ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದ್ದು, ಫೆ.15 ರೊಳಗೆ ಸಂಪೂರ್ಣ ಸರ್ವೇ ಮಾಡಿ ಅದರ ವರದಿಯನ್ನು ಸಲ್ಲಿಸಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅಲ್ಲದೇ ಹೂಗ್ಯಂ ಗ್ರಾಮದ ಸರ್ವೇ ನಂಬರ್ 239ರಲ್ಲಿ 2 ಸಾವಿರ ಎಕರೆಯಲ್ಲಿ ಈ ಹಿಂದೆ ರೈತರು ರೈತರು ಸಾಗುವಳಿ ಮಾಡುತ್ತಿದ್ದರು. ಆದರೆ ಇದೀಗ ಅರಣ್ಯ ಇಲಾಖೆ ಸ್ವಾಧೀನ ಪಡಿಸಿಕೊಂಡಿದೆ. ಇನ್ನು ನಾಗಣ್ಣ ನಗರದಲ್ಲಿ 2 ಎಕರೆಯಲ್ಲಿ ಕೃಷಿ ಮಾಡುತ್ತಿರುವ ರೈತರು ಹಾಗೂ ದಾಖಲೆಗಳಲ್ಲಿ ವ್ಯತ್ಯಾಸವಿದೆ. ಆದ್ದರಿಂದ ಸರ್ವೇ ಮಾಡಿ ತಿದ್ದುಪಡಿ ಮಾಡುವಂತೆ ತಿಳಿಸಲಾಗಿದೆ.

ತಾಲೂಕಿನ ಚಂಗಡಿ ಗ್ರಾಮದ ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಂಡು 2 ವರ್ಷವೇ ಕಳೆದಿದ್ದು, ಗ್ರಾಮದ ಜನರಿಗೆ ಪುನರ್ವಸತಿ ಕಲ್ಪಿಸಲು ಸ್ಥಳವನ್ನು ಗುರ್ತಿಸಲಾಗಿದೆ.ಆದರೆ ಸರ್ಕಾರದಿಂದ ಇನ್ನು ಅನುದಾನ ಬಿಡುಗಡೆಯಾಗಿಲ್ಲ.ಆದ್ದರಿಂದ ಸರ್ಕಾರದಿಂದ ಅನುದಾನ ಬಿಡುಗಡೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago