ಹನೂರು: ತಾಲೂಕಿನ ನೆಲ್ಲೂರು, ಹೂಗ್ಯಂ, ನಾಗಣ್ಣನಗರ ಹಾಗೂ ಜಾಗೇರಿ ಸಾಗುವಳಿ ಜಮೀನು ಸಮಸ್ಯೆ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಪಿಡಬ್ಯುಡಿ ವಸತಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಲ್ಲೂರು ಗ್ರಾಮದಲ್ಲಿ 8 ಎಕರೆ ದರ್ಖಾಸ್ ಜಮೀನು ಇದೆ. ಆದರೆ ಆ ಜಾಗವನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದು, ಕಂದಕವನ್ನು ನಿರ್ಮಿಸಲಾಗಿದೆ. ಹಾಗಾಗಿ ಈ ಬಗ್ಗೆ ಸರ್ವೇ ಕಾರ್ಯ ನಡೆಸಲು ತಹಸೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಜಾಗವನ್ನು ನಿವೇಶನವನ್ನಾಗಿ ಪರಿವರ್ತಿಸಿ ಜನರಿಗೆ ನೀಡಲಾಗುವುದು. ಜೊತೆಗೆ ಜಾಗೇರಿಯ ಅರಣ್ಯ ಪ್ರದೇಶದಲ್ಲಿ 3 ಸಾವಿರ ಎಕರೆಯಲ್ಲಿ ರೈತರು ಹಲವು ವರ್ಷಗಳಿಂದ ಸ್ವಾಧೀನದಲ್ಲಿದ್ದು, ಕೃಷಿ ಮಾಡುತ್ತಿದ್ದಾರೆ. ಆದರೆ ಸಾಗುವಳಿ ಚೀಟಿ ನೀಡುವಲ್ಲಿ ಅರಣ್ಯ ಇಲಾಖೆಯಿಂದ ಸಮಸ್ಯೆಯಾಗುತ್ತಿದೆ. ಈ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದ್ದು, ಫೆ.15 ರೊಳಗೆ ಸಂಪೂರ್ಣ ಸರ್ವೇ ಮಾಡಿ ಅದರ ವರದಿಯನ್ನು ಸಲ್ಲಿಸಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಅಲ್ಲದೇ ಹೂಗ್ಯಂ ಗ್ರಾಮದ ಸರ್ವೇ ನಂಬರ್ 239ರಲ್ಲಿ 2 ಸಾವಿರ ಎಕರೆಯಲ್ಲಿ ಈ ಹಿಂದೆ ರೈತರು ರೈತರು ಸಾಗುವಳಿ ಮಾಡುತ್ತಿದ್ದರು. ಆದರೆ ಇದೀಗ ಅರಣ್ಯ ಇಲಾಖೆ ಸ್ವಾಧೀನ ಪಡಿಸಿಕೊಂಡಿದೆ. ಇನ್ನು ನಾಗಣ್ಣ ನಗರದಲ್ಲಿ 2 ಎಕರೆಯಲ್ಲಿ ಕೃಷಿ ಮಾಡುತ್ತಿರುವ ರೈತರು ಹಾಗೂ ದಾಖಲೆಗಳಲ್ಲಿ ವ್ಯತ್ಯಾಸವಿದೆ. ಆದ್ದರಿಂದ ಸರ್ವೇ ಮಾಡಿ ತಿದ್ದುಪಡಿ ಮಾಡುವಂತೆ ತಿಳಿಸಲಾಗಿದೆ.
ತಾಲೂಕಿನ ಚಂಗಡಿ ಗ್ರಾಮದ ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಂಡು 2 ವರ್ಷವೇ ಕಳೆದಿದ್ದು, ಗ್ರಾಮದ ಜನರಿಗೆ ಪುನರ್ವಸತಿ ಕಲ್ಪಿಸಲು ಸ್ಥಳವನ್ನು ಗುರ್ತಿಸಲಾಗಿದೆ.ಆದರೆ ಸರ್ಕಾರದಿಂದ ಇನ್ನು ಅನುದಾನ ಬಿಡುಗಡೆಯಾಗಿಲ್ಲ.ಆದ್ದರಿಂದ ಸರ್ಕಾರದಿಂದ ಅನುದಾನ ಬಿಡುಗಡೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…
ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…
ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…