ಜಿಲ್ಲೆಗಳು

ಕಾರಾಗೃಹಗಳು ಮನಃ ಪರಿವರ್ತನೆ ಮಾಡುವ ಕೇಂದ್ರಗಳಾಗಿ ಕಾರ್ಯ ನಿರ್ವಹಿಸುತ್ತಿವೆ : ದಿನೇಶ್ ಬಿ ಜಿ

ಮೈಸೂರು :  ಕಾನೂನಿನ ಮುಖ್ಯ ಉದ್ದೇಶ ಮನಃ ಪರಿವರ್ತನೆ ಮಾಡುವುದು. ಕಾರಾಗೃಹಗಳು ಮನಃ ಪರಿವರ್ತನೆ ಮಾಡುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ ಅವರು ತಿಳಿಸಿದರು.

ಇಂದು ನಗರದ ಕೇಂದ್ರ ಕಾರಾಗೃಹದಲ್ಲಿ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ಕೇಂದ್ರ ಕಾರಾಗೃಹ ಮೈಸೂರು, ಸಂಚಲನ ರಂಗ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಕಾರಾಗೃಹದ ಬಂದಿ ನಿವಾಸಿಗಳಿಗೆ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಕರ್ಣಾತರಂಗ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಪ್ಪುಗ ಳು ತಾವು ಕೋಪಕ್ಕೆ ಬುದ್ದಿ ಕೊಟ್ಟು ಆಗಿರುತ್ತವೆ. ತಾವು ಯಾವುದೋ ಸನ್ನಿವೇಶದಲ್ಲಿ ಪ್ರಕೋಪಕ್ಕೆ ಒಳಗಾಗಿ ತಪ್ಪು ಮಾಡಿರುತ್ತಿರಿ. ಅದನ್ನು ತಿದ್ದಿಕೊಂಡು ಬದುಕಿ. ನಾಟಕ ಕಲೆಗಳು ಮನಃ ಪರಿವರ್ತನೆಗೆ ಉತ್ತಮ ಮದ್ದುಗಳು. ಮುಂದಿನ ದಿನಗಳಲ್ಲಿ ತಾವು ಬದಲಾಗಿ ಸಮಾಜದ ಮುಖ್ಯವಾಹಿನಿಗೆ ಬಂದು ಉತ್ತಮ ಜೀವನ ನಡೆಸಿ ಎಂದು ತಿಳಿಸಿದರು.

ದಕ್ಷಿಣ ವಲಯ ಕಾರಾಗೃಹಗಳ ಮಹಾ ನಿರೀಕ್ಷಕರಾದ ಸೋಮಶೇಖರ್ ಅವರು ಮಾತನಾಡಿ ಕಾರಾಗೃಹ ನಿವಾಸಿಗಳಿಗೆ ಈ ರೀತಿ ನಾಟಕಗಳು ಕಲೆಯಲ್ಲಿ ತೊಡಗಿಸುವುದರಿಂದ ಅವರ ಮನಃ ಪರಿವರ್ತನೆ ಸಾಧ್ಯವಾಗುತ್ತದೆ. ಕಾರಾಗೃಹದ ಬಂದಿ ನಿವಾಸಿಗಳಲ್ಲಿ ವಿವಿಧ ಕಲೆಗಳಲ್ಲಿ ಪ್ರತಿಭಾನ್ವಿತ ವ್ಯಕ್ತಿಗಳು ಇದ್ದಾರೆ ಎಂದು ತಿಳಿಸಿದರು.

ಕಾರಾಗೃಹದ ಮುಖ್ಯ ಅಧೀಕ್ಷಕರಾದ ಪಿ.ಎಸ್ ರಮೇಶ್ ಅವರು ಮಾತನಾಡಿ ಮೈಸೂರು ಸಾಂಸ್ಕೃತಿಕ ನಗರಿ. ಕಲೆ ಸಂಸ್ಕೃತಿಯ ತವರೂರು. ಕನ್ನಡ ಅಕ್ಷರ ಬರಹ ಓದಲು ಬರೆಯಲು ಬರದವರು ಸಹ ನಾಟಕದಲ್ಲಿ ಪಾತ್ರದಾರಿಗಳಾಗಿ ಭಾಗವಹಿಸಿದ್ದಾರೆ. ಮೂರು ತಿಂಗಳ ಕಾಲ ನಿರಂತರವಾಗಿ ಅಭ್ಯಾಸ ಮಾಡಿ ಇಂದು ನಾಟಕ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಚಲನ ರಂಗಸoಸ್ಥೆಯ ಅಧ್ಯಕ್ಷರಾದ ದೀಪಕ್ ಅವರು ಮಾತನಾಡಿ ಕಾರಾಗೃಹದ ನಿವಾಸಿಗಳಿಗೆ ಕನ್ನಡ ವರ್ಣಮಾಲೆಯಿಂದ ಕಲಿತು ನಾಟಕ ಮಾಡುವ ಹಂತಕ್ಕೆ ಬೆಳೆಸಲಾಗಿದೆ.

ಯಾವುದೇ ಮನುಷ್ಯ ಕಲೆ ಸಾಹಿತ್ಯ ಸಂಸ್ಕೃತಿ ಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಅವರು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ. ತಪ್ಪು ಮಾಡಿರುವ ನೀವು ಅದನ್ನು ತಿದ್ದಿಕೊಂಡು ನಡೆಯಬೇಕು.

ತಾವು ಸಮಾಜದ ಮುಖ್ಯವಾಹಿನಿಗೆ ಬಂದು ಉತ್ತಮ ಜೀವನ ನಡೆಸಬೇಕು. ಮನುಷ್ಯ ಬದಲಾಗಿ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾರಾಗೃಹದ ಅಧೀಕ್ಷಕರಾದ ಪಿ. ಮಹಾದೇವನಾಯ್ಕ, ಸೈಕಲ್ ಅಗರಬತ್ತಿ ಸಂಸ್ಥೆಯ ಹರೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

2 hours ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

2 hours ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

2 hours ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

3 hours ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

3 hours ago