ಜಿಲ್ಲೆಗಳು

ಕಾರಾಗೃಹಗಳು ಮನಃ ಪರಿವರ್ತನೆ ಮಾಡುವ ಕೇಂದ್ರಗಳಾಗಿ ಕಾರ್ಯ ನಿರ್ವಹಿಸುತ್ತಿವೆ : ದಿನೇಶ್ ಬಿ ಜಿ

ಮೈಸೂರು :  ಕಾನೂನಿನ ಮುಖ್ಯ ಉದ್ದೇಶ ಮನಃ ಪರಿವರ್ತನೆ ಮಾಡುವುದು. ಕಾರಾಗೃಹಗಳು ಮನಃ ಪರಿವರ್ತನೆ ಮಾಡುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ ಅವರು ತಿಳಿಸಿದರು.

ಇಂದು ನಗರದ ಕೇಂದ್ರ ಕಾರಾಗೃಹದಲ್ಲಿ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ಕೇಂದ್ರ ಕಾರಾಗೃಹ ಮೈಸೂರು, ಸಂಚಲನ ರಂಗ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಕಾರಾಗೃಹದ ಬಂದಿ ನಿವಾಸಿಗಳಿಗೆ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಕರ್ಣಾತರಂಗ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಪ್ಪುಗ ಳು ತಾವು ಕೋಪಕ್ಕೆ ಬುದ್ದಿ ಕೊಟ್ಟು ಆಗಿರುತ್ತವೆ. ತಾವು ಯಾವುದೋ ಸನ್ನಿವೇಶದಲ್ಲಿ ಪ್ರಕೋಪಕ್ಕೆ ಒಳಗಾಗಿ ತಪ್ಪು ಮಾಡಿರುತ್ತಿರಿ. ಅದನ್ನು ತಿದ್ದಿಕೊಂಡು ಬದುಕಿ. ನಾಟಕ ಕಲೆಗಳು ಮನಃ ಪರಿವರ್ತನೆಗೆ ಉತ್ತಮ ಮದ್ದುಗಳು. ಮುಂದಿನ ದಿನಗಳಲ್ಲಿ ತಾವು ಬದಲಾಗಿ ಸಮಾಜದ ಮುಖ್ಯವಾಹಿನಿಗೆ ಬಂದು ಉತ್ತಮ ಜೀವನ ನಡೆಸಿ ಎಂದು ತಿಳಿಸಿದರು.

ದಕ್ಷಿಣ ವಲಯ ಕಾರಾಗೃಹಗಳ ಮಹಾ ನಿರೀಕ್ಷಕರಾದ ಸೋಮಶೇಖರ್ ಅವರು ಮಾತನಾಡಿ ಕಾರಾಗೃಹ ನಿವಾಸಿಗಳಿಗೆ ಈ ರೀತಿ ನಾಟಕಗಳು ಕಲೆಯಲ್ಲಿ ತೊಡಗಿಸುವುದರಿಂದ ಅವರ ಮನಃ ಪರಿವರ್ತನೆ ಸಾಧ್ಯವಾಗುತ್ತದೆ. ಕಾರಾಗೃಹದ ಬಂದಿ ನಿವಾಸಿಗಳಲ್ಲಿ ವಿವಿಧ ಕಲೆಗಳಲ್ಲಿ ಪ್ರತಿಭಾನ್ವಿತ ವ್ಯಕ್ತಿಗಳು ಇದ್ದಾರೆ ಎಂದು ತಿಳಿಸಿದರು.

ಕಾರಾಗೃಹದ ಮುಖ್ಯ ಅಧೀಕ್ಷಕರಾದ ಪಿ.ಎಸ್ ರಮೇಶ್ ಅವರು ಮಾತನಾಡಿ ಮೈಸೂರು ಸಾಂಸ್ಕೃತಿಕ ನಗರಿ. ಕಲೆ ಸಂಸ್ಕೃತಿಯ ತವರೂರು. ಕನ್ನಡ ಅಕ್ಷರ ಬರಹ ಓದಲು ಬರೆಯಲು ಬರದವರು ಸಹ ನಾಟಕದಲ್ಲಿ ಪಾತ್ರದಾರಿಗಳಾಗಿ ಭಾಗವಹಿಸಿದ್ದಾರೆ. ಮೂರು ತಿಂಗಳ ಕಾಲ ನಿರಂತರವಾಗಿ ಅಭ್ಯಾಸ ಮಾಡಿ ಇಂದು ನಾಟಕ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಚಲನ ರಂಗಸoಸ್ಥೆಯ ಅಧ್ಯಕ್ಷರಾದ ದೀಪಕ್ ಅವರು ಮಾತನಾಡಿ ಕಾರಾಗೃಹದ ನಿವಾಸಿಗಳಿಗೆ ಕನ್ನಡ ವರ್ಣಮಾಲೆಯಿಂದ ಕಲಿತು ನಾಟಕ ಮಾಡುವ ಹಂತಕ್ಕೆ ಬೆಳೆಸಲಾಗಿದೆ.

ಯಾವುದೇ ಮನುಷ್ಯ ಕಲೆ ಸಾಹಿತ್ಯ ಸಂಸ್ಕೃತಿ ಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಅವರು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ. ತಪ್ಪು ಮಾಡಿರುವ ನೀವು ಅದನ್ನು ತಿದ್ದಿಕೊಂಡು ನಡೆಯಬೇಕು.

ತಾವು ಸಮಾಜದ ಮುಖ್ಯವಾಹಿನಿಗೆ ಬಂದು ಉತ್ತಮ ಜೀವನ ನಡೆಸಬೇಕು. ಮನುಷ್ಯ ಬದಲಾಗಿ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾರಾಗೃಹದ ಅಧೀಕ್ಷಕರಾದ ಪಿ. ಮಹಾದೇವನಾಯ್ಕ, ಸೈಕಲ್ ಅಗರಬತ್ತಿ ಸಂಸ್ಥೆಯ ಹರೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

8 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

10 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

10 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

11 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

11 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

11 hours ago