ಜಿಲ್ಲೆಗಳು

ಜೈನ ಕ್ಷೇತ್ರ: ಪ್ರವಾಸಿತಾಣ ಅನುಮತಿ ರದ್ದತಿಗೆ ಆಗ್ರಹಿಸಿ ನಾಳೆ ಪ್ರತಿಭಟನೆ

ಮೈಸೂರು: ಜಾರ್ಖಂಡ್ ರಾಜ್ಯದ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣವಾದ ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಕ್ಕೆ ಅನುಮತಿ ನೀಡಿರುವುದನ್ನು ರದ್ದುಪಡಿಸಬೇಕು ಎಂದು ಮೈಸೂರಿನ ಶ್ರೀ ದಿಗಂಬರ ಜೈನ ಸಮಾಜ ಆಗ್ರಹಿಸಿದೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ ಎಸ್.ಡಿ.ಮಹೇಶ್ ಪ್ರಸಾದ್, ಅಹಿಂಸಾ ತತ್ವವನ್ನು ಸಾರಿದ ಜೈನಧರ್ಮದ ೨೪ ತೀರ್ಥಂಕರರ ಲ್ಲಿ ೨೦ ತೀರ್ಥಂಕರರು ತಮ್ಮ ಕೋಟ್ಯಂತರ ಮುನಿ ಸಂಘಗಳ ಜತೆ ಮೋಕ್ಷ ಪಡೆದಂತಹ ಅತ್ಯಂತ ಪ್ರಾಚೀನ ಹಾಗೂ ಪವಿತ್ರ ಸ್ಥಳವೇ ಶ್ರೀ ಸಮ್ಮೇದ ಶಿಖರ್ಜಿ. ಈ ಪವಿತ್ರ ತಾಣವನ್ನು ಪ್ರವಾಸಿ ತಾಣ ವಾಗಿಸಲು ಅನುಮತಿ ನೀಡಿರುವುದು ಸರಿಯಲ್ಲ. ಕೂಡಲೇ ಜಾರ್ಖಂಡ್ ರಾಜ್ಯ ಸರ್ಕಾರ ಆದೇಶವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವಾಗಿ ಮಾಡಲು ಹೊರಟಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಡಿ.೧೯ರಂದು ಬೆಳಿಗ್ಗೆ ೧೦ರಿಂದ ೧೧ ಗಂಟೆಯವರೆಗೆ ಮೌನ ಪ್ರತಿಭಟನೆ ಮಾಡಿ ನಂತರ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು. ಸಮಾಜದ ಉಪಾಧ್ಯಕ್ಷ ಭರತ್ ರಾಜ್, ಕಾರ್ಯದರ್ಶಿ ಸುನಿಲ್ ಕುಮಾರ್, ಮಹಿಳಾ ಅಧ್ಯಕ್ಷರಾದ ಲತಾ ಸುದರ್ಶನ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

9 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

11 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

15 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago