ಜಿಲ್ಲೆಗಳು

ಜೈನ ಕ್ಷೇತ್ರ: ಪ್ರವಾಸಿತಾಣ ಅನುಮತಿ ರದ್ದತಿಗೆ ಆಗ್ರಹಿಸಿ ನಾಳೆ ಪ್ರತಿಭಟನೆ

ಮೈಸೂರು: ಜಾರ್ಖಂಡ್ ರಾಜ್ಯದ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣವಾದ ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಕ್ಕೆ ಅನುಮತಿ ನೀಡಿರುವುದನ್ನು ರದ್ದುಪಡಿಸಬೇಕು ಎಂದು ಮೈಸೂರಿನ ಶ್ರೀ ದಿಗಂಬರ ಜೈನ ಸಮಾಜ ಆಗ್ರಹಿಸಿದೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ ಎಸ್.ಡಿ.ಮಹೇಶ್ ಪ್ರಸಾದ್, ಅಹಿಂಸಾ ತತ್ವವನ್ನು ಸಾರಿದ ಜೈನಧರ್ಮದ ೨೪ ತೀರ್ಥಂಕರರ ಲ್ಲಿ ೨೦ ತೀರ್ಥಂಕರರು ತಮ್ಮ ಕೋಟ್ಯಂತರ ಮುನಿ ಸಂಘಗಳ ಜತೆ ಮೋಕ್ಷ ಪಡೆದಂತಹ ಅತ್ಯಂತ ಪ್ರಾಚೀನ ಹಾಗೂ ಪವಿತ್ರ ಸ್ಥಳವೇ ಶ್ರೀ ಸಮ್ಮೇದ ಶಿಖರ್ಜಿ. ಈ ಪವಿತ್ರ ತಾಣವನ್ನು ಪ್ರವಾಸಿ ತಾಣ ವಾಗಿಸಲು ಅನುಮತಿ ನೀಡಿರುವುದು ಸರಿಯಲ್ಲ. ಕೂಡಲೇ ಜಾರ್ಖಂಡ್ ರಾಜ್ಯ ಸರ್ಕಾರ ಆದೇಶವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವಾಗಿ ಮಾಡಲು ಹೊರಟಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಡಿ.೧೯ರಂದು ಬೆಳಿಗ್ಗೆ ೧೦ರಿಂದ ೧೧ ಗಂಟೆಯವರೆಗೆ ಮೌನ ಪ್ರತಿಭಟನೆ ಮಾಡಿ ನಂತರ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು. ಸಮಾಜದ ಉಪಾಧ್ಯಕ್ಷ ಭರತ್ ರಾಜ್, ಕಾರ್ಯದರ್ಶಿ ಸುನಿಲ್ ಕುಮಾರ್, ಮಹಿಳಾ ಅಧ್ಯಕ್ಷರಾದ ಲತಾ ಸುದರ್ಶನ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

9 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

14 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

15 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

15 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

15 hours ago