ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಮಧ್ಯೆ ಸೋಮವಾರ (ಜ. 16)ದಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಗೊಳ್ಳಲಿದೆ.
ಕೆಎಸ್ಆರ್ಟಿಸಿಯು ಕೇಂದ್ರ ಸರ್ಕಾರದ ಫೇಮ್ -2 ಯoಜನೆಯಡಿ ಮೊದಲ ಬಾರಿಗೆ ಅಂತರ ನಗರ (ಬೆಂಗಳೂರು -ಮೈಸೂರು) ಮಧ್ಯೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಿದೆ. ಈಗಾಗಲೇ ಶುಕ್ರವಾರ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ. ಮುಂದಿನ ಒಂದು ತಿಂಗಳಲ್ಲಿ ಬೆಂಗಳೂರಿನಿಂದ ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಮಡಿಕೇರಿ ಮತ್ತು ವಿರಾಜಪೇಟೆಗಳಿಗೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಗೊಳ್ಳಲಿದೆ.
ಓಲೆಕ್ಟ್ರಾ ಗ್ರೀನ್ಟೆಕ್ ಕಂಪೆನಿಯಿಂದ ಜಿಸಿಸಿ(ಗ್ರಾಸ್ ಕಾಸ್ಟ್ ಕಂಟ್ರಾಕ್ಟ್) ಮಾದರಿಯಲ್ಲಿ 50 ಬಸ್ಗಳನ್ನು ಕೆಎಸ್ಆರ್ಟಿಸಿ ಪಡೆಯುತ್ತಿದ್ದು, ಇದರ ಮೊದಲ ಬಸ್ ಈ ಮಾರ್ಗದಲ್ಲಿ ಸಂಚರಿಸಲಿದೆ. ಉಳಿದ 49 ಬಸ್ಗಳು ವಿವಿಧ ಹಂತದಲ್ಲಿ ಮಾರ್ಗಕ್ಕಿಳಿಯಲಿದ್ದು ಅವು ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಮಧ್ಯೆ ಸಂಚರಿಸಲಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಸಿದ್ದಾರೆ.
ಈ ಬಸ್ನ ಬ್ಯಾಟರಿಯನ್ನು ಒಮ್ಮೆ ಚಾರ್ಜ್ ಮಾಡಿದರೆ 320ಕಿಲೋ ಮೀಟರ್ ಸಂಚರಿಸುತ್ತದೆ. ಆರು ಕಡೆ ಚಾರ್ಜಿಂಗ್ ಘಟಕಗಳನ್ನು ತೆರೆಯಲಾಗಿದ್ದು, ಅಲ್ಲಿ ಒಂದು ಗಂಟೆ ಚಾರ್ಜ್ ಮಾಡಿಕೊಂಡು ಮತ್ತೆ ರಾಜಧಾನಿಗೆ ವಾಪಸ್ ಬರಲಿದೆ ಎಂದು ವಿವರಿಸಿದರು.
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…