ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಮಧ್ಯೆ ಸೋಮವಾರ (ಜ. 16)ದಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಗೊಳ್ಳಲಿದೆ.
ಕೆಎಸ್ಆರ್ಟಿಸಿಯು ಕೇಂದ್ರ ಸರ್ಕಾರದ ಫೇಮ್ -2 ಯoಜನೆಯಡಿ ಮೊದಲ ಬಾರಿಗೆ ಅಂತರ ನಗರ (ಬೆಂಗಳೂರು -ಮೈಸೂರು) ಮಧ್ಯೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಿದೆ. ಈಗಾಗಲೇ ಶುಕ್ರವಾರ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ. ಮುಂದಿನ ಒಂದು ತಿಂಗಳಲ್ಲಿ ಬೆಂಗಳೂರಿನಿಂದ ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಮಡಿಕೇರಿ ಮತ್ತು ವಿರಾಜಪೇಟೆಗಳಿಗೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಗೊಳ್ಳಲಿದೆ.
ಓಲೆಕ್ಟ್ರಾ ಗ್ರೀನ್ಟೆಕ್ ಕಂಪೆನಿಯಿಂದ ಜಿಸಿಸಿ(ಗ್ರಾಸ್ ಕಾಸ್ಟ್ ಕಂಟ್ರಾಕ್ಟ್) ಮಾದರಿಯಲ್ಲಿ 50 ಬಸ್ಗಳನ್ನು ಕೆಎಸ್ಆರ್ಟಿಸಿ ಪಡೆಯುತ್ತಿದ್ದು, ಇದರ ಮೊದಲ ಬಸ್ ಈ ಮಾರ್ಗದಲ್ಲಿ ಸಂಚರಿಸಲಿದೆ. ಉಳಿದ 49 ಬಸ್ಗಳು ವಿವಿಧ ಹಂತದಲ್ಲಿ ಮಾರ್ಗಕ್ಕಿಳಿಯಲಿದ್ದು ಅವು ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಮಧ್ಯೆ ಸಂಚರಿಸಲಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಸಿದ್ದಾರೆ.
ಈ ಬಸ್ನ ಬ್ಯಾಟರಿಯನ್ನು ಒಮ್ಮೆ ಚಾರ್ಜ್ ಮಾಡಿದರೆ 320ಕಿಲೋ ಮೀಟರ್ ಸಂಚರಿಸುತ್ತದೆ. ಆರು ಕಡೆ ಚಾರ್ಜಿಂಗ್ ಘಟಕಗಳನ್ನು ತೆರೆಯಲಾಗಿದ್ದು, ಅಲ್ಲಿ ಒಂದು ಗಂಟೆ ಚಾರ್ಜ್ ಮಾಡಿಕೊಂಡು ಮತ್ತೆ ರಾಜಧಾನಿಗೆ ವಾಪಸ್ ಬರಲಿದೆ ಎಂದು ವಿವರಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…